Dharwad: ಕುಡಗೊಲಿನಿಂದ ಅತ್ತಿಗೆಯ ಕತ್ತು ಸೀಳಿದ ಮೈದುನ..!

Published : Sep 08, 2022, 05:16 PM IST
Dharwad: ಕುಡಗೊಲಿನಿಂದ ಅತ್ತಿಗೆಯ ಕತ್ತು ಸೀಳಿದ ಮೈದುನ..!

ಸಾರಾಂಶ

ಹಾಡುಹಗುಲೆ ಮೈದುನನಿಂದ ಅತ್ತಿಗೆಯ ಕಗ್ಗೊಲೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ಘಟನೆ.

ಧಾರವಾಡ, (ಸೆಪ್ಟೆಂಬರ್ .08): ಮೈದುನನನೇ ಕುಡಗೊಲಿನಿಂದ ಅತ್ತಿಗೆಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಸುನಂದಾ ಮೆಣಸಿನಕಾಯಿ(40) ಕೊಲೆ ಆಗಿರುವ ದುರ್ದೈವಿ ಮಹಿಳೆ. ಮನೆಯಲ್ಲಿ ಆಂತರಿಕ ಕಲಹ ಹಿನ್ನಲೆ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಮಡಿಕೇರಿ ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ಶಿಕ್ಷಣ ಇಲಾಖೆಯ ಸೂಪರಿಡೆಂಟ್

ಕುಡಗೊಲಿನಿಂದ ಸುನಂದಾಳ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕುಂದಗೋಳ ಪೊಲೀಸರ ಭೇಟಿ ಪರಿಶೀಲನೆ ಮಾಡಿದರು. ಬಳಿಕ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಗಂಡ- ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ
ಶಿವಮೊಗ್ಗ: ಗಂಡ- ಹೆಂಡತಿ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೃತಳನ್ನು ಮಂಜುಳಾ (30) ಎಂದು ಗುರುತಿಸಲಾಗಿದೆ. ಶಿವಮೊಗ್ಗ(Shivamogga) ದ ಪ್ರಿಯಾಂಕ ಲೇಔಟ್ (Priyanka Layout) ನಲ್ಲಿ ಈ ಘಟನೆ ನಡೆದಿದ್ದು, ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಮಂಜುಳಾ ಮೃತದೇಹ ಪತ್ತೆಯಾಗಿದೆ.

ಇತ್ತ ಪತ್ನಿ ಕೊಲೆ ಬಳಿಕ ಪತಿ ದಿನೇಶ್ ಕೂಡ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಸ್ಥಳೀಯರು, ಮಂಗಳವಾರ ರಾತ್ರಿ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಸದ್ಯ ಪ್ರಕರಣ ಸಂಬಂಧ ಮಹಿಳೆಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ..? ಅಥವಾ ಕೊಲೆಯೇ ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗಗೊಳ್ಳಬೇಕಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ