ಮಂಗಳೂರಿನ ಲಾಡ್ಜ್ ಒಂದರಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ, ಅನುಮಾನಕ್ಕೆ ಕಾರಣವಾದ ಟ್ಯಾಬ್ಲೆಟ್!

Published : Dec 13, 2022, 04:25 PM IST
ಮಂಗಳೂರಿನ ಲಾಡ್ಜ್ ಒಂದರಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ, ಅನುಮಾನಕ್ಕೆ ಕಾರಣವಾದ ಟ್ಯಾಬ್ಲೆಟ್!

ಸಾರಾಂಶ

ಮಂಗಳೂರಿನ ಪಂಪ್ ವೆಲ್ ಬಳಿಯ ಪದ್ಮಶ್ರೀ ಲಾಡ್ಜ್ ಕೋಣೆಯಲ್ಲಿ ನಗ್ನವಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವಪತ್ತೆಯಾಗಿದ್ದು, ಮೃತದೇಹದ ಬಳಿ ಪತ್ತೆಯಾದ ಕೆಲ ಮಾತ್ರೆಗಳು ಅನುಮಾನಕ್ಕೆ ‌ಕಾರಣವಾಗಿದೆ.

ವರದಿ: ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್  

ಮಂಗಳೂರು (ಡಿ.13): ಲಾಡ್ಜ್ ಕೋಣೆಯಲ್ಲಿ ನಗ್ನವಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವಪತ್ತೆಯಾಗಿದ್ದು, ಮೃತದೇಹದ ಬಳಿ ಪತ್ತೆಯಾದ ಕೆಲ ಮಾತ್ರೆಗಳು ಅನುಮಾನಕ್ಕೆ ‌ಕಾರಣವಾಗಿದೆ. ಮಂಗಳೂರಿನ ಪಂಪ್ ವೆಲ್ ಬಳಿಯ ಪದ್ಮಶ್ರೀ ಲಾಡ್ಜ್ ನಲ್ಲಿ ಶವ ಪತ್ತೆಯಾಗಿದ್ದು, ಕೇರಳದ ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಮೃತ ವ್ಯಕ್ತಿಯಾಗಿದ್ದಾರೆ‌. ನಿನ್ನೆ ಬೆಳಗ್ಗೆ ಕರೀಂ ಲಾಡ್ಜ್ ಪಡೆದಿದ್ದು, ಮಧ್ಯಾಹ್ನ 1.30 ಕ್ಕೆ ಕರೀಮ್ ಇದ್ದ ರೂಮ್ ಗೆ ಬುರ್ಖಾಧಾರಿ ಮಹಿಳೆಯೊಬ್ಬರು ಬಂದು ಹೋಗಿರುವುದು ಸಿಸಿ ಟಿವಿಯಲ್ಲಿ ದಾಖಲಾಗಿದೆ. ಈ ಮಹಿಳೆ 2.30 ಕ್ಕೆ ರೂಮ್ ನಿಂಸ ವಾಪಾಸ್ ಆಗಿದ್ದಾಳೆ. ಈ ನಡುವೆ ರೂಂ ನಲ್ಲಿ 'Ksheerabala' ಹೆಸರಿನ ಆಯುರ್ವೇದಿಕ್ ಟ್ಯಾಬ್ಲೆಟ್ಸ್ ಪತ್ತೆಯಾಗಿದ್ದು, ಅನುಮಾನಕ್ಕೆ ‌ಕಾರಣವಾಗಿದೆ‌. ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂಕನಾಡಿ ಪೊಲೀಸ್ ಠಾಣೆಗೆ ಅನುಮಾನಸ್ಪದ ಸಾವು ಅಂತಾ ದೂರು ಕರೀಂ ಮನೆಯವರು‌ ದೂರು ನೀಡಿದ್ದಾರೆ. ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dharwad: ಕ್ಷುಲ್ಲಕ ಕಾರಣಕ್ಕೆ ಮಾವನಿಗೆ ಚಾಕುವಿನಿಂದ ಇರಿದ ಅಳಿಯ

ನಿರಂತರ ಫೋನ್ ರಿಂಗ್ ಆದಾಗ ಅನುಮಾನ!
ನಿನ್ನೆಯೇ ಕರೀಂ ಇಲ್ಲಿ ರೂಂ ಪಡೆದಿದ್ದರೂ ಆ ಬಳಿಕ ಕೊಠಡಿಯಿಂದ ಹೊರ ಬಂದಿಲ್ಲ ಎನ್ನಲಾಗಿದೆ. ಮಹಿಳೆ ಬಂದು ಹೋದ ಬಳಿಕ ಕರೀಂ ಹೊರ ಹೋಗಿಲ್ಲ. ಇಂದು ಬೆಳಿಗ್ಗಿನಿಂದ ಕರೀಂ ಮೊಬೈಲ್ ನಿರಂತರವಾಗಿ ರಿಂಗ್ ಆಗ್ತಿದ್ದು, ಲಾಡ್ಜ್ ನ ರೂಂ ಬಾಯ್ ಗಮನಕ್ಕೆ ಬಂದಿದೆ. ಹೀಗಾಗಿ ಆತ ಬಾಗಿಲು ಬಡಿದರೂ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಕೊಠಡಿ ಬಾಗಿಲು ತೆರೆಯಲಾಗಿದೆ. ಇದೇ ವೇಳೆ ಕರೀಂ ನಾಪತ್ತೆ ಹಿನ್ನೆಲೆ ಮತ್ತು ಫೋನ್ ಸ್ವೀಕರಿಸದ ಕಾರಣದಿಂದ ಕರೀಂ ಪತ್ನಿಯ ಸಹೋದರ ಮಂಗಳೂರಿಗೆ ಬಂದು ಹುಡುಕಾಟ ನಡೆಸಿದ್ದಾರೆ.

VIJAYAPURA: ಒಂಟಿಯಾಗಿ ವಾಸಿಸುವವರೇ ಹುಷಾರ್, ಒಂಟಿ ಮನೆಗಳನ್ನ ಟಾರ್ಗೆಟ್‌ ಮಾಡ್ತಿದ್ದ ಗ್ಯಾಂಗ್‌ ಅಂದರ್

ಕೊನೆಗೆ ಕರೀಂ ಹೊಟೇಲ್ ವ್ಯಾಪ್ತಿಗೆ ಬರೋ ಕಂಕನಾಡಿ ಪೊಲೀಸ್ ಠಾಣೆಯನ್ನ ಸಂಪರ್ಕಿಸಿ ನಾಪತ್ತೆ ದೂರು ನೀಡಲು ಹೋದಾಗ ಲಾಡ್ಜ್ ನಲ್ಲಿ ಸಿಕ್ಕ ಶವ ಕರೀಂನದ್ದೇ ಎನ್ನುವುದು ಬೆಳಕಿಗೆ ಬಂದಿದೆ. ನಾಲ್ಕು ಮಕ್ಕಳ ತಂದೆಯಾಗಿರೋ ಕರೀಂಗೆ ಪಡೀಲ್ ನಲ್ಲಿ ಹೊಟೇಲ್ ನ ಜೊತೆಗೆ ಬಂಟ್ವಾಳ ಬಳಿ ಇಂಟರ್ ಲಾಕ್ ಫ್ಯಾಕ್ಟರಿ ಕೂಡ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ಲಾಕ್ ಡೌನ್ ಗೂ ಮುನ್ನ ಕರೀಂ ಇದೇ ಲಾಡ್ಜ್ ನಲ್ಲಿ ರೂಂ ಮಾಡಿದ್ದ ಮಾಹಿತಿ ಲಭಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Telangana Crime: ಮಗು ಅಳ್ತಿದೆ ಅಂತಾ ಬಾಯಿಗೆ ಬಟ್ಟೆ ತುರುಕಿ, ಉರಿವ ಬೆಂಕಿಯಲ್ಲಿ ಜೀವಂತ ಸುಟ್ಟ ತಾಯಿ!
Mallikarjuna Mutya: ಅಪ್ರಾಪ್ತ ಬಾಲಕಿಯ ಅಪ್ಪಿಕೊಂಡು ಮುದ್ದಾಟ, ಯಾದಗಿರಿಯ ಮಲ್ಲಿಕಾರ್ಜುನ ಮುತ್ಯಾ ಮೇಲೆ ಬಿತ್ತು ಕೇಸ್‌!