ಕೊಡವ ಜನಾಂಗದ ಅವಹೇಳನ: ದುಷ್ಕರ್ಮಿಯ ಬಂಧಿಸಿದ ಪೊಲೀಸ್‌ ತಂಡಕ್ಕೆ ಬಹುಮಾನ ಘೋಷಣೆ

Published : Jul 19, 2022, 10:20 AM ISTUpdated : Jul 19, 2022, 10:21 AM IST
ಕೊಡವ ಜನಾಂಗದ ಅವಹೇಳನ: ದುಷ್ಕರ್ಮಿಯ ಬಂಧಿಸಿದ ಪೊಲೀಸ್‌ ತಂಡಕ್ಕೆ ಬಹುಮಾನ ಘೋಷಣೆ

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ಕಾವೇರಿ ಮತ್ತು ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್  ಪ್ರಕರಣದ ಪ್ರಮುಖ ಆರೋಪಿಯನ್ನು ಕಾರ್ಯಾಚರಣೆ ನಡೆಸಿ ಬಂಧಿಸಿದ ಪೊಲೀಸರಿಗೆ ಡಿಜಿಪಿ ಪ್ರವೀಣ್ ಸೂದ್ 25000 ರೂ. ಬಹುಮಾನ ಘೋಷಿಸಿದ್ದಾರೆ.

ಮಡಿಕೇರಿ (ಜು.19} : ನಕಲಿ ಇನ್ಸಟಾಗ್ರಾಂ ಖಾತೆ ತೆರೆದು ಕಾವೇರಿ ಹಾಗೂ ಕೊಡವ ಜನಾಂಗವನ್ನು ಅವಹೇಳನ ಮಾಡಿ ಜಿಲ್ಲಾದ್ಯಂತ ಸಂಘರ್ಷಕ್ಕೆ ಕಾರಣವಾಗುವ ಸನ್ನಿವೇಶ ಸೃಷ್ಟಿಸಿದ್ದ ದುಷ್ಕರ್ಮಿಯನ್ನು ಬಂಧಿಸಿರುವ ಕೊಡಗು ಜಿಲ್ಲಾ ಪೊಲೀಸರ ಕಾರ್ಯವನ್ನು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಹಾಗೂ ಪೊಲೀಸ್‌ ಮಹಾನಿರೀಕ್ಷಕ ಪ್ರವೀಣ್‌ ಸೂದ್‌(Praveen sood DGP) ಶ್ಲಾಘಿಸಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸ್‌ ತಂಡಕ್ಕೆ 25000 ರು. ಬಹುಮಾನ ಘೋಷಿಸಿದ್ದಾರೆ.

ಸಾಮಾಜಿಕ ಜಾಲತಾಣ(Social Media)ದಲ್ಲಿ ಕೊಡಗು(Kodagu) ಜಿಲ್ಲೆಯ ಒಂದು ಜನಾಂಗದ ವಿರುದ್ದ ಅವಹೇಳನ ಮಾಡಿದ್ದ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಿದ ಜಿಲ್ಲೆಯ ಪೊಲೀಸರ ಕಾರ್ಯವನ್ನು ಶ್ಲಾಘಿಸಿ ರಾಜ್ಯದ ಮಹಾ ನಿರ್ದೇಶಕರು ಮತ್ತು ಪೊಲೀಸ್‌ ಮಹಾ ನಿರೀಕ್ಷಕರು 25,000 ರುಪಾಯಿ ನಗದು ಬಹುಮಾನ ಘೋಷಿಸಿದ್ದಾರೆ ಎಂದು ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟ್ವೀಟ್‌(Tweet)( ಮೂಲಕ ಮಾಹಿತಿ ನೀಡಿದ್ದಾರೆ.

ಕೊಡವ ಜನಾಂಗವನ್ನು ಅವಹೇಳನ ಮಾಡಿದ್ದ ವಿರಾಜಪೇಟೆ(Virajapete) ತಾಲೂಕಿನ ಕೆ.ಸಿ.ದಿವಿನ್‌ ದೇವಯ್ಯ(K.C.Divin Devaiah) (29) ಎಂಬ ಕೊಡವ ಯುವಕನನ್ನು ಭಾನುವಾರ ಜಿಲ್ಲಾ ಪೊಲೀಸರು(Police) ಬಂಧಿಸಿದ್ದರು.

ಇದನ್ನೂ ಓದಿ: KODAGU; ಕೊಡವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದಾತ ಬಂಧನ

ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚೆಗೆ ಕೊಡವ ಸಮಾಜದ ಮಹಿಳೆಯರನ್ನು ಅವಹೇಳನ ಮಾಡಿ ಅಪರಿಚಿತ ಖಾತೆಯಿಂದ ಪೋಸ್ಟ್‌ ಹಾಕಲಾಗಿತ್ತು. ನಂತರ ಇದಕ್ಕೆ ಸಂಬಂಧವಿಲ್ಲದ ಅಮಾಯಕ ಮುಸ್ಲಿಮ್‌ ಯುವಕನ ಫೋಟೋ ಎಡಿಟ್‌ ಮಾಡಿ ವ್ಯಾಪಕವಾಗಿ ಹರಡಿ ಆತನಿಗೆ ಮಾನಸಿಕ ಕಿರುಕುಳ ನೀಡಲಾಗಿತ್ತು. ಈ ಮಧ್ಯೆ ಸಂಘಪರಿವಾರ ಜಿಲ್ಲಾ ಬಂದ್‌ ಕರೆ ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!