ಕಲಬುರಗಿ: ವ್ಯಕ್ತಿಯನ್ನು ಅಪಹರಿಸಿ ಬರ್ಬರ ಕೊಲೆ

Published : Jul 15, 2021, 02:35 PM IST
ಕಲಬುರಗಿ: ವ್ಯಕ್ತಿಯನ್ನು ಅಪಹರಿಸಿ ಬರ್ಬರ ಕೊಲೆ

ಸಾರಾಂಶ

* ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ * ಹಣದ ವಿಚಾರವಾಗಿ ಸ್ನೇಹಿತರೇ ಕೊಲೆ ಮಾಡಿರುವ ಶಂಕೆ  * ಇಬ್ಬರು ಆರೋಪಿಗಳನ್ನ ಬಂಧಿಸಿದ ಪೊಲೀಸರು  

ಕಲಬುರಗಿ(ಜು.15): ವ್ಯಕ್ತಿಯನ್ನು ಅಪಹರಿಸಿ, ಹತ್ಯೆಗೈದು ಶವವನ್ನು ರೈಲ್ವೆ ಹಳಿ ಮೇಲೆ ಬಿಸಾಡಿ ಹೋಗಿದ್ದ ಘಟನೆ ಜಿಲ್ಲೆಯ ಶಹಬಾದ್‌ ತಾಲೂಕಿನ ಮರ್ತೂರು ಬಳಿ ನಡೆದಿದೆ. ಚೆನ್ನಬಸಪ್ಪ ನಾಯ್ಕೋಡಿ(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. 

ಮೃತ ಚೆನ್ನಬಸಪ್ಪ ಜೇವರ್ಗಿ ತಾಲೂಕಿನ ಬಿಲ್ಲಾಡ್‌ ಗ್ರಾಮದ ನಿವಾಸಿಯಾಗಿದ್ದು, ಕಳೆದ ಶನಿವಾರ ಗ್ರಾಮದಿಂದ ನಾಪತ್ತೆಯಾಗಿದ್ದನು. ಬಳಿಕ ಭಾನುವಾರ ಅವರ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದು, ಹಣದ ವಿಚಾರವಾಗಿ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು. 

ಹುಬ್ಬಳ್ಳಿ: ಶೀಲ ಶಂಕಿಸಿ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ರೈಲ್ವೆ ಹಳಿ ಬಳಿ ಬಿಸಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣ ಸಂಬಂಧ ವಾಡಿ ರೈಲ್ವೆ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!