ಹಾವೇರಿ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ, ವ್ಯಕ್ತಿಯ ಬರ್ಬರ ಕೊಲೆ

Kannadaprabha News   | Asianet News
Published : Aug 09, 2021, 12:36 PM IST
ಹಾವೇರಿ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ, ವ್ಯಕ್ತಿಯ ಬರ್ಬರ ಕೊಲೆ

ಸಾರಾಂಶ

*  ಪ್ರಕರಣ ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳ ಬಂಧನ *   ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಚಿಕ್ಕಬೆಂಡಿಗೇರಿ ಗ್ರಾಮದಲ್ಲಿ ನಡೆದ ಘಟನೆ *  ಬೈಕ್‌ನಲ್ಲಿ ಡಿಕ್ಕಿ ಹೊಡೆಸಿ ಚಾಕುವಿನಿಂದ ಚುಚ್ಚಿ, ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ    

ಹಾವೇರಿ(ಆ.09): ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಆಕೆಯ ಪತಿಯೇ ಕೊಲೆ ಮಾಡಿರುವ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಿಗ್ಗಾಂವಿ ತಾಲೂಕಿನ ಚಿಕ್ಕಬೆಂಡಿಗೇರಿ ಗ್ರಾಮದ ಉಮೇಶ ವಿರೂಪಾಕ್ಷಪ್ಪ ನಂದೆಣ್ಣನವರ (32) ಕೊಲೆಯಾಗಿರುವ ವ್ಯಕ್ತಿ. ಅದೇ ಗ್ರಾಮದ ಚನ್ನಬಸನಗೌಡ ಪಾಟೀಲ ಹಾಗೂ ಹಿರೇಬೆಂಡಿಗೇರಿ ಗ್ರಾಮದ ಶಂಕರಗೌಡ ಪಾಟೀಲ ಬಂಧಿತ ಆರೋಪಿಗಳು.

9ರ ಬಾಲಕಿ ಮೇಲೆ ಸ್ಮಶಾನದಲ್ಲಿ ಅತ್ಯಾಚಾರ, ಶವ ಸುಟ್ಟುಹಾಕಿ ಪ್ರಕರಣ ಮುಚ್ಚಿಹಾಕಲು ಯತ್ನ!

ಕೊಲೆಯಾದ ಉಮೇಶನು ಚನ್ನಬಸನಗೌಡನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಆ. 4ರಂದು ಬೈಕ್‌ನಲ್ಲಿ ಬರುತ್ತಿದ್ದಾಗ ಆರೋಪಿಗಳಿಬ್ಬರೂ ಸೇರಿ ಶಿಗ್ಗಾಂವಿ ತಾಲೂಕಿನ ಕೃಷಿ ನಗರದಿಂದ ಬಿಸೆಟ್ಟಿಕೊಪ್ಪಕ್ಕೆ ಹೋಗುವ ನಿರ್ಜನ ಪ್ರದೇಶದಲ್ಲಿ ಬೈಕ್‌ನಲ್ಲಿ ಡಿಕ್ಕಿ ಹೊಡೆಸಿ ಚಾಕುವಿನಿಂದ ಚುಚ್ಚಿ, ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ನಂತರ ಶವವನ್ನು ಕಾಲುವೆಯಲ್ಲಿ ಒಗೆದು ಹೋಗಿದ್ದಾರೆ.

ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಭಾನುವಾರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಬೈಕ್‌, 15 ಸಾವಿರ ರು. ನಗದು, ಚಾಕು ವಶವಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!
ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ , ಯುವಕನ ಮೇಲೆ ಹಲ್ಲೆ, ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!