ನಕಲಿ ಆರ್ಮಿ ಅಧಿಕಾರಿಯನ್ನು ಹೆಡೆಮುರಿ ಕಟ್ಟಿದ ನೇವಿ ಇಂಟೆಲಿಜೆನ್ಸ್, ಕಾರವಾರ ಪೊಲೀಸರು

Published : Nov 04, 2022, 08:09 PM IST
ನಕಲಿ ಆರ್ಮಿ ಅಧಿಕಾರಿಯನ್ನು ಹೆಡೆಮುರಿ ಕಟ್ಟಿದ ನೇವಿ ಇಂಟೆಲಿಜೆನ್ಸ್, ಕಾರವಾರ ಪೊಲೀಸರು

ಸಾರಾಂಶ

ಲೆಫ್ಟಿನೆಂಟ್ ಕರ್ನಲ್ ರ್ಯಾಂಕಿಂಗ್ ಯೂನಿಫಾರ್ಮ್ ಧರಿಸಿಕೊಂಡು ಅಡ್ಡಾಡುತ್ತಾ ಜನರಿಗೆ ಮೋಸ ಮಾಡುತ್ತಿದ್ದ ವ್ಯಕ್ತಿಯನ್ನು ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರ ಜಂಟಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ.

ಉತ್ತರ ಕನ್ನಡ (ನ.4): ಲೆಫ್ಟಿನೆಂಟ್ ಕರ್ನಲ್ ರ್ಯಾಂಕಿಂಗ್ ಯೂನಿಫಾರ್ಮ್ ಧರಿಸಿಕೊಂಡು ಅಡ್ಡಾಡುತ್ತಾ ಜನರಿಗೆ ಮೋಸ ಮಾಡುತ್ತಿದ್ದ ವ್ಯಕ್ತಿಯನ್ನು ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರ ಜಂಟಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ. ಉತ್ತರಕನ್ನಡ ಜಿಲ್ಲಾ ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಎಂಬಾತನೇ ಬಂಧಿತ ಫೇಕ್ ಆರ್ಮಿ ಪರ್ಸನ್. ಪ್ರತೀ ದಿನ ಆರ್ಮಿ ಯೂನಿಫಾರ್ಮ್ ಧರಿಸಿಕೊಂಡು ಬೈಕ್‌ನಲ್ಲೇ ಕಾರವಾರ, ಸೌತ್ ಗೋವಾ ಓಡಾಡುತ್ತಿದ್ದ ಈ ಫೇಕ್ ಆರ್ಮಿ ಪರ್ಸನ್, ಆರ್ಮಿಯಲ್ಲಿ ಕೆಲಸ ಕೊಡಿಸೋದಾಗಿ ಹಲವರಿಂದ ಹಣ ಪಡೆದು ಮೋಸ ಮಾಡಿದ್ದಾನೆ. ಒಬ್ಬರಿಂದ 66,000ರೂ., ಇನ್ನೊಬ್ಬರಿಂದ 35,000ರೂ. ಸೇರಿದಂತೆ ಹಲವರಿಂದ ಹಣ ಪಡೆದು ಪಂಗನಾಮ ಹಾಕಿರುವ ಈ ಭೂಪ, ಒಬ್ಬರಿಂದಂತೂ 4 ಲಕ್ಷ ರೂ. ಪಡೆದು ಕೊನೆಗೂ ವಾಪಾಸ್ ನೀಡಿದ್ದ. ಕಾರವಾರ ಕಡವಾಡ ಮಾರುತಿ ನಗರದ ಹೇಮಲತಾ ಎಂಬವರ ಪುತ್ರ ಪ್ರಸಾದ್ ಎಂಬಾತನಿಗೆ ನೇವಿಯಲ್ಲಿ ಪಿಯೋನ್ ಕೆಲಸ ಕೊಡಿಸುವುದಾಗಿ 35,000ರೂ. ಪಡೆದಿದ್ದ ವಿನಾಯಕ ಮಹಾಲೆ, ಅವರಿಗೂ ಮೋಸ ಮಾಡಿದ್ದ. 

ಈತನ ಚಟುವಟಿಕೆಯನ್ನು‌ ಗಮನಿಸುತ್ತಿದ್ದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು, ಕಳೆದ ಒಂದೆರಡು ವಾರಗಳಿಂದ ಈತನ ಮೇಲೆ ನಿಗಾಯಿರಿಸಿದ್ದರು. ಬಳಿಕ ಗ್ರೌಂಡ್ ವರ್ಕ್ ಮಾಡಿದಾಗಿ ಈತನ ಅಸಲೀಯತ್ತು ಬಯಲಾಗಿದ್ದು,  ಕೂಡಲೇ ಜಂಟಿ ಕಾರ್ಯಾಚರಣೆ ನಡೆಸಿದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿಯ ಮನೆಯನ್ನು ಹುಡುಕಾಡಿದಾಗ 66,000ರೂ.ನಗದು ಹಣ ಲಭ್ಯವಾಗಿದ್ದು, ಆರೋಪಿ ವಿರುದ್ಧ ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

Umesh Reddy: ವಿಕೃತ ಕಾಮಿ ಉಮೇಶ್‌ ರೆಡ್ಡಿ ಗಲ್ಲು ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ಅಲ್ಲದೇ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಂದಹಾಗೆ, ಆರೋಪಿ ಆರ್ಮಿ ಹೆಸರಿನಲ್ಲಿ ಭಾರೀ ಹಣ ಮಾಡಲು ಮಾಸ್ಟರ್ ಪ್ಲ್ಯಾನ್ ಹಾಕಿಕೊಂಡಿದ್ದ. ಈ ಹಿಂದೆ ಆರೋಪಿ ಬೆಳಗಾವಿ ಕಮಾಂಡೋ ಟ್ರೈನಿಂಗ್ ಸ್ಕೂಲ್‌ನಲ್ಲಿ ಚಿಕ್ಕಪುಟ್ಟ ಕೆಲಸಕ್ಕೆ ಸೇರಿಕೊಂಡಿದ್ದ. ಮರಾಠಾ ಲೈಟ್ ಇನ್‌ಫೆಂಟ್ರಿ ವಿಭಾಗದಡಿ ಹೆಲ್ಪಿಂಗ್ ಬಾಯ್ ಆಗಿ ಸ್ವೀಪಿಂಗ್ ಮುಂತಾದ ಕೆಲಸ ಮಾಡ್ತಿದ್ದ ಈ ಭೂಪ ಅಲ್ಲೇ ಅಧಿಕಾರಿಗಳ ರ್ಯಾಂಕಿಂಗ್, ಅವರ ಯೂನಿಫಾರ್ಮ್‌ಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದ.‌ 

ನಡೆದುಕೊಂಡು ಹೋಗುವಾಗ ಕ್ರೇನ್‌ ಹರಿದು ವಿದ್ಯಾರ್ಥಿನಿ ದಾರುಣ ಸಾವು, ಸ್ಥಳೀಯರ ಪ್ರತಿಭಟನೆ

ಬಳಿಕ ಆ ಕೆಲಸವನ್ನು ಬಿಟ್ಟು 2015-16ರ ವೇಳೆ ಆರ್ಮಿ ಆಫಿಸರ್ ಯೂನಿಫಾರ್ಮ್ ಖರೀದಿಸಿದ್ದ ಆರೋಪಿ, 2020ರಿಂದ ತಾನು ಅಧಿಕಾರಿಯೆಂದು ತೋರಿಸಿಕೊಳ್ಳುತ್ತಾ ಎಲ್ಲೆಡೆ ಅಡ್ಡಾಡ್ತಿದ್ದ.‌‌ ಕಾರವಾರ ಹಾಗೂ ಗೋವಾ ಭಾಗದಲ್ಲಿ ಹಲವರಿಗೆ ಮೋಸ ಮಾಡಿರುವ ಈತನನ್ನು ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ಕೊನೆಗೂ ಜಾಲ ಬೀಸಿ ಹೆಡೆಮುರಿ ಕಟ್ಟಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!