ಬಾಲ್ಯದಲ್ಲೇ  ಅನಾಥವಾಗಿ ಬಿಟ್ಟು ಹೋದವರ ಮೇಲಿನ ದ್ವೇಷ ಸಾಧನೆಗೆ ಬ್ಯಾಂಕ್ ಲೂಟಿ

Published : Jun 27, 2021, 08:28 PM IST
ಬಾಲ್ಯದಲ್ಲೇ  ಅನಾಥವಾಗಿ ಬಿಟ್ಟು ಹೋದವರ ಮೇಲಿನ ದ್ವೇಷ ಸಾಧನೆಗೆ ಬ್ಯಾಂಕ್ ಲೂಟಿ

ಸಾರಾಂಶ

* ಬ್ಯಾಂಕ್ ದರೋಡೆ ಮಾಡಿದ ಕಳ್ಳರ  ಐಷಾರಾಮಿ ಬದುಕು * ಹೆತ್ತವರಿಗೆ ದುಬಾರಿ ಗಿಫ್ಟ್ ತಂದುಕೊಟ್ಟವ ಒಬ್ಬ * ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿ ಬೇರೆ ರಾಜ್ಯಕ್ಕೆ ಪಲಾಯನ ಮಾಡುವರಿದ್ದರು * ಬಾಲ್ಯದಲ್ಲಿ ಬಿಟ್ಟುಹೋದ ತಂದೆ-ತಾಯಿ ಮೇಲೆ  ಹಗೆ ಸಾಧಿಸಲು ಕಳ್ಳತನ

ನಾಗಪುರ(ಜೂ.  27)   ಮಹಾರಾಷ್ಟ್ರದ 18 ವರ್ಷದ ಯುವಕನೊಬ್ಬ ಬ್ಯಾಂಕ್ ದರೋಡೆ  ಮಾಡಿದ್ದು ಅಲ್ಲದೆ ಅದೇ ಹಣದಲ್ಲಿ ತನ್ನ  ಪಾಲಕರಿಗೆ ಭರ್ಜರಿ ಗಿಫ್ಟ್ ನೀಡಿದ್ದಾನೆ.

ಕಳ್ಳತನ ಮಾಡಿದ ಯುವಕ ತನ್ನ ತಾಯಿಗೆ 50,000 ರೂ. ಆಭರಣ ನೀಡಿದರೆ ತಂದೆಗೆ 40,000 ರೂ.ಗಳ ಸೆಕೆಂಡ್ ಹ್ಯಾಂಡ್ ಕಾರನ್ನು ನೀಡಿದ್ದಾನೆ  ಇಂದಿರಾ ಗಾಂಧಿ ನಗರದ ಬಾರನಾಲ್ ಚೌಕದಲ್ಲಿರುವ ಸಹಕಾರಿ ಬ್ಯಾಂಕನ್ನು ಆರೋಪಿ  ದರೋಡೆ ಮಾಡಿದ್ದ.

ದರೋಡೆ ಮಾಡಿದ್ದ ಯುವಕನನ್ನು 18 ವರ್ಷದ  ಅಜಯ್ ಬಂಜಾರೆ ಎಂದು ಗುರುತಿಸಲಾಗಿದೆ. ಬಂಜಾರೆ ಮತ್ತು ಅವರ ಸಹಚರ ಪ್ರದೀಪ್ ಠಾಕೂರ್  ಸೇರಿ ಬ್ಯಾಂಕಿನಿಂದ 4.78 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದರು.  ಒಟ್ಟಿಗೆ ಕೆಲಸ ಮಾಡುತ್ತಿದ್ದ ಇಬ್ಬರು ಸೇರಿ ದರೋಡೆಗೆ ಇಳಿದಿದ್ದರು.

ನೂರು ರೂಪಾಯಿಗೆ ಮಾಜಿ ಕುಲಪತಿ ಹತ್ಯೆ

ವರದಿಯ ಪ್ರಕಾರ, ಠಾಕೂರ್ ಮತ್ತು ಬಂಜಾರೆ ಹಲವಾರು ವರ್ಷಗಳಿಂದ ಒಟ್ಟಿಗೆ ಕೆಲಸ ಮಾಡುತ್ತಿದ್ದರು.  ಒಬ್ಬ ವ್ಯಕ್ತಿಗೆ ತನ್ನ ತಂದೆ -ತಾಯಿಯನ್ನು  ಇಂಪ್ರೆಸ್ ಮಾಡಲು ಮುಂದಾಗಿದ್ದರೆ ಇನ್ನೊಬ್ಬ ತನ್ನ ದ್ವೇಷ ಸಾಧನೆಗೆ ಹಣ ಹೊಂದಿಸುತ್ತಿದ್ದ. ದೀಪ್ ಠಾಕೂರ್  ಅಪರಾಧ ಲೋಕಕ್ಕೆ ಇಳಿಯಲು ಮುಂದಾಗಿದ್ದು ಬಾಲ್ಯದಲ್ಲೇ ತನ್ನ ಬಿಟ್ಟು ಹೋದ ತಂದೆ-ತಾಯಿ ಹುಡುಕಿ ಅವರ ಮೇಲೆ ದ್ವೇಷ ಸಾಧಿಸಬೇಕು ಎಂದುಕೊಂಡಿದ್ದ.

ಹಣ ಕದ್ದವರು ದುಬಾರಿ ಪೋನ್ ಗಳನ್ನು ಖರೀದಿ ಮಾಡಿದ್ದರು. ಇನ್ನೊಂದು ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿ  ರಾಜಸ್ಥಾನದ ಕಡೆ ಪರಾರಿಯಾಗಲು ಯತ್ನಿಸುತ್ತಿದ್ದರು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!