
ಬೆಂಗಳೂರು(ಜ.12): ಪಾಗಲ್ ಪ್ರೇಮಿ ಪ್ರಿಯತಮೆ ಮೇಲೆ ಮನಸೊ ಇಚ್ಛೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೇಮಿ ಪ್ರೇಯಸಿ ಮೇಲೆ ಹಲ್ಲೆ ನಡೆಸಿದ ಘಟನೆ
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದ ಮೂರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತಿದ್ದ ಮಂಜುನಾಥ ಕಳೆದ ವರ್ಷ ಆಗಸ್ಟ್ ನಿಂದ ಲವ್ ಬ್ರೇಕ್ ಅಪ್ ಅಗಿತ್ತು. ಮಂಜುನಾಥನನ್ನು ಲವ್ ಮಾಡಲ್ಲಾ ಎಂದು ಯುವತಿ ತಿರಸ್ಕರಿಸಿದ್ದಳು.
ಫೋನ್ ಉಳಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದ ನಟಿ ನಮಿತಾ?
ಬಳಿಕ ಯುವತಿ ಯುವಕನ ಜೊತೆ ಸಂಪರ್ಕ ಕಡಿತಗೊಳಿಸಿದ್ದಳು. ಹಲವಾರು ಬಾರಿ ಬೇರೆ ಬೇರೆ ಫೋನ್ ನಂಬರ್ ನಿಂದ ಕರೆ ಮಾಡಿ ಹಿಂಸೆ ನೀಡ್ತಿದ್ದ ಮಂಜುನಾಥ್
ಕಳೆದ ಹದಿನೈದು ದಿನದ ಹಿಂದೆ ಯುವತಿ ಮನೆ ಬಳಿ ಬಂದು ಗಲಾಟೆ ಮಾಡಿದ್ದ.
ಮನೆಗೆ ಬಂದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಸ್ಕ್ರೂ ಡ್ರೈವರ್ ನಿಂದ ಹಲ್ಲೆ ಮಾಡಿದ್ದಾನೆ. ಮುಖ, ಹೊಟ್ಟೆ, ತಲೆ, ಕೈ ಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಹಲ್ಲೆ ನಡೆಸಲಾಗಿದೆ. ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ಯುವತಿ ದೂರು ನೀಡಿದ್ದಾರೆ. ಪ್ರೇಯಸಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಮನಸೋ ಇಚ್ಛೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಿದ ಪಾಗಲ್ ಪ್ರೇಮಿಯನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ