ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಹಾವೇರಿಯಲ್ಲಿ ಬಂಧನ

Published : Nov 07, 2024, 05:35 AM IST
ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಹಾವೇರಿಯಲ್ಲಿ ಬಂಧನ

ಸಾರಾಂಶ

ನಟ ಸಲ್ಮಾನ್‌ ಖಾನ್‌ಗೆ ಪಾತಕಿ ಲಾರೆನ್ಸ್ ಬಿಷ್ಣೋಯಿ ಸೋದರ ಅನ್ಮೋಲ್‌ ಬಿಷ್ಣೋಯಿ ಹೆಸರಲ್ಲಿ ಜೀವ ಬೆದರಿಕೆ ಒಡ್ಡಿದ ಜೊತೆಗೆ 5 ಕೋಟಿ ರು.ಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ/ಹಾವೇರಿ (ನ.07): ನಟ ಸಲ್ಮಾನ್‌ ಖಾನ್‌ಗೆ ಪಾತಕಿ ಲಾರೆನ್ಸ್ ಬಿಷ್ಣೋಯಿ ಸೋದರ ಅನ್ಮೋಲ್‌ ಬಿಷ್ಣೋಯಿ ಹೆಸರಲ್ಲಿ ಜೀವ ಬೆದರಿಕೆ ಒಡ್ಡಿದ ಜೊತೆಗೆ 5 ಕೋಟಿ ರು.ಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣವನ್ನು ಬೆನ್ನತ್ತಿದ ಮುಂಬೈನ ವರ್ಲಿ ಪೊಲೀಸರು, ಕರ್ನಾಟಕಕ್ಕೆ ಆಗಮಿಸಿ ಮಂಗಳವಾರ ರಾತ್ರಿ ಹಾವೇರಿಯಲ್ಲಿದ್ದ ಆರೋಪಿ ಭಿಕಾರಾಂ ಜಲರಾಂ ಬಿಷ್ಣೋಯಿಯನ್ನು ಬಂಧಿಸಿದ್ದಾರೆ. ಈತ ರಾಜಸ್ಥಾನದ ಜಾಲೋರ್‌ ಮೂಲದವ. ಈತನನ್ನು ವಶಕ್ಕೆ ಪಡೆದು ಸ್ಥಳೀಯ ನ್ಯಾಯಾಲಯದ ಅನುಮತಿ ಪಡೆದು ವಿಚಾರಣೆ ಮೇರೆಗೆ ಮುಂಬೈಗೆ ಕರೆದೊಯ್ದಿದ್ದಾರೆ.

ಆರೋಪಿಯು ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಸೋದರನ ಹೆಸರಿನಲ್ಲಿ ಮುಂಬೈ ಟ್ರಾಫಿಕ್‌ ಪೊಲೀಸರಿಗೆ ವಾಟ್ಸಪ್‌ನಲ್ಲಿ ಬೆದರಿಕೆ ಹಾಕಿದ್ದ. ‘ಕೃಷ್ಣಮೃಗ ಕೊಂದಿದ್ದಕ್ಕೆ ಬಿಷ್ಣೋಯಿ ಸಮಾಜದ ಕ್ಷಮೆ ಕೇಳು, ಇಲ್ಲವೇ 5 ಕೋಟಿ ರು. ಹಣ ನೀಡು’ ಎಂದು ಸಂದೇಶ ಕಳುಹಿಸಿದ್ದ. ಬಳಿಕ ಸಂದೇಶ ಬಂದಿದ್ದು ಕರ್ನಾಟಕದಿಂದ ಎಂದು ಪೊಲೀಸರಿಗೆ ತನಿಖೆ ವೇಳೆ ಗೊತ್ತಾಗಿತ್ತು.

ಸಿದ್ದುಗೆ ತಾಕತ್ತಿದ್ದರೆ ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: ಯಡಿಯೂರಪ್ಪ ಸವಾಲು

ಕೂಲಿ ಕೆಲಸಕ್ಕೆಂದು ಬಂದಿದ್ದ: ಬಂಧಿತ ಆರೋಪಿ ಭಿಕಾರಾಂ ಒಂದೂವರೆ ತಿಂಗಳ ಹಿಂದೆ ಕೂಲಿಕಾರ್ಮಿಕನಾಗಿ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ನಂತರ ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!