ಮಂಡ್ಯ: ಮೂರು KSRTC ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ!

Published : Oct 19, 2025, 05:05 PM IST
Mandya KSRTC bus accident Malavalli Kollegala highway

ಸಾರಾಂಶ

ಮಂಡ್ಯ ಜಿಲ್ಲೆಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ಮೂರು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಭೇಟಿ, ಸ್ಥಳ ಪರಿಶೀಲನೆ.

ಮಂಡ್ಯ (ಅ.19): ಒಂದಲ್ಲ ಎರಡಲ್ಲ ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಗ್ರಾಮದ ಬಳಿ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನಡೆದಿದೆ.

ಭಾನುವಾರ ನಡೆದ ಈ ಭೀಕರ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಒಟ್ಟು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಮಳವಳ್ಳಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಮೂರು ಬಸ್‌ಗಳ ಸರಣಿ ಡಿಕ್ಕಿ

ಘಟನೆಯ ವಿವರಗಳ ಪ್ರಕಾರ, ಎರಡು KSRTC ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಈ ಘರ್ಷಣೆಯಿಂದಾಗಿ ಮತ್ತೊಂದು ಬಸ್‌ಗೂ ಡಿಕ್ಕಿಯಾಗಿದೆ. ಇದರಿಂದ ಮೂರು ಬಸ್‌ಗಳ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದ. ಡಿಕ್ಕಿಯಾದ ರಭಸಕ್ಕೆ ಮೂರು ಬಸ್‌ಗಳ ಕೆಲವು ಭಾಗಗಳು ಜಖಂಗೊಂಡಿವೆ.

ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ:

ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಘಟನೆಯ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ವೇಗವಾಗಿ ವಾಹನ ಚಲಾಯಿಸಿದ್ದು ಅಥವಾ ರಸ್ತೆಯ ಸ್ಥಿತಿಗತಿ ಕಾರಣವಿರಬಹುದು ಎನ್ನಲಾಗಿದೆ. ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ಸ್ಥಳೀಯರು ಅಪಘಾತದ ದೃಶ್ಯಗಳನ್ನ ಕಂಡು ಬೆಚ್ಚಿಬಿದ್ದರು.

ಸಂಸದ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್:

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ