ಕೆಆರ್ ಪೇಟೆ: ಅನುಮಾನಾಸ್ಪದ ಸ್ಥಿತಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಶವ ಪತ್ತೆ!

Published : Nov 23, 2025, 11:03 AM IST
Mandya suspicious death case

ಸಾರಾಂಶ

ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದ ಬಾವಿಯೊಂದರಲ್ಲಿ ಚಿಕ್ಕಮಗಳೂರು ಮೂಲದ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಕರಣ್ ಅವರ ಮೃತದೇಹ ಪತ್ತೆಯಾಗಿದೆ. ಶವದ ಬಳಿ ಬೈಕ್ ಮತ್ತು ಮೊಬೈಲ್ ಪತ್ತೆಯಾಗಿದ್ದು, ಇದು ಆತ್ಮ೧ಹತ್ಯೆಯೋ ಕೊಲೆಯೋ ಎಂಬ ಸಂಶಯ ಮೂಡಿಸಿದೆ. 

ಮಂಡ್ಯ (ನ.23): ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ಬಾವಿಯೊಂದರಲ್ಲಿ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಮೂಲದ ಕರಣ್.ಎಸ್ (22) ಎಂದು ಗುರುತಿಸಲಾಗಿದೆ.

ಆತ್ಮಹ೧ಹತ್ಯೆಯೋ, ಕೊಲೆಯೋ?

​ಕರಣ್ ಅವರು ಶ್ರವಣಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಬಾವಿಯ ಸಮೀಪದಲ್ಲೇ ಬೈಕ್ ಮತ್ತು ಮೊಬೈಲ್ ಸಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಘಟನೆಯು ಹಲವು ಸಂಶಯಗಳಿಗೆ ಕಾರಣವಾಗಿದೆ.

ಸ್ಥಳಕ್ಕೆ ಪೊಲೀಸರ ಆಗಮನ;

​ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದರು. ನಂತರ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಲಾಯಿತು. ಇದು ಆತ್ಮ೧ಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆಆರ್ ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿದ್ಯಾರ್ಥಿಯ ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ