
ಮಂಗಳೂರು (ಅ.3): ಮಹಾರಾಷ್ಟ್ರದ ಸೋಲಾಪುರದ ನೀರುಳ್ಳಿ ವ್ಯಾಪಾರಿಯೋವ೯ ಮಂಗಳೂರಿನ ವ್ಯಕ್ತಿಗೆ 75 ಲಕ್ಷ ರು.ವ೦ಚನೆ ಮಾಡಿರುವ ಬಗ್ಗೆ ಮ೦ಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಅಬ್ದುಲ್ ರಹಿಮಾನ್ ಬಾವಾ ಎ೦ಬವರಿಗೆ ವ್ಯವಹಾರದ ಸಮಯ ಮಹಾರಾಷ್ಟ್ರದ ಸೋಲಾಪುರದ ಸಿದ್ದೇಶ್ವರ ಟ್ರೆಡರ್ಸ್ ನ ಕುಂಡಲಿಕ್ ಜುಂಬಾರ್ ಖಂಡಾಗಲೆ ವಂಚಿಸಿದ ಆರೋಪಿ.
ಆರ್ಡರ್ ಮಾಡದೆ ಮನೆಗೆ ಬಂತು ಸಾವಿರ ಕಾಂಡೋಮ್! ಹಣ ಕಟ್ ಆಗ್ತಿದ್ದಂತೆ ಮಹಿಳೆ ಕಂಗಾಲು
ಮಂಗಳೂರು ಮತ್ತು ಚೆನ್ನೈನಲ್ಲಿ ವ್ಯವಹಾರ ಹೊಂದಿರುವ ನೀರುಳ್ಳಿ ವ್ಯಾಪಾರಿಯು ಜನವರಿ 2021 ರಲ್ಲಿ ಪರಿಚಯವಾಗಿ ನಂತರ ಇತರ ಕೃಷಿ ಉತ್ಪನ್ನಗಳ ವ್ಯವಹಾರಗಳ ಮೂಲಕ ಆತ್ಮೀಯರಾಗಿದ್ದರು.
ನಂತರ ಆರೋಪಿ ಕುಂಡಲಿಕ್ ಜುಂಬಾರ್ ಖಂಡಾಗಲೆ ವಂಚಿಸುವ ಉದ್ದೇಶದಿಂದ ವ್ಯವಹಾರದಲ್ಲಿ ಒಳ್ಳೆಯ ಹೂಡಿಕೆ ಅವಕಾಶ ಇದೆ ಎಂಬುದಾಗಿ ನಂಬಿಸಿ ಮಂಗಳೂರಿಗೆ ಬಂದು ಆತನ ಮಾಲೀಕತ್ವದ ಸಿದ್ದೇಶ್ವರ ಟ್ರೇಡರ್ಸ್ ಗೆ ಅಬ್ದುಲ್ ರಹಿಮಾನ್ ಅವರ ಮಂಗಳೂರಿನ ಬ್ಯಾಂಕ್ ಖಾತೆಯಿ೦ದ ವಿವಿಧ ದಿನಗಳಲ್ಲಿ 75,00,000 ರು. ವನ್ನು ವರ್ಗಾಯಿಸಿ ನಂತರ ವಾಪಾಸು ನೀಡದೆ ವಂಚಿಸಿರುವುದಾಗಿ ಸೆನ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಫೇಸ್ಬುಕ್ ದೋಖಾ: ಮದುವೆಯಾಗಿ 3 ತಿಂಗಳಾದ್ರೂ ದೈಹಿಕ ಸಂಪರ್ಕ ಬೆಳಸದೇ ಚಿನ್ನಾಭರಣ ಕದ್ದು ಪರಾರಿಯಾದ ಲೇಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ