
ಮಂಗಳೂರು, (ಸೆ.27): ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಮಂಗಳೂರು ಕೆಎಸ್ಆರ್ಟಿಸಿ (KSRTC) ಘಟಕದ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆಎಸ್ಆರ್ಟಿಸಿ ಮಂಗಳೂರು (Mangaluru) ವಿಭಾಗದ 3ನೇ ಘಟಕದ ಚಾಲಕ ಕಂ ನಿರ್ವಾಹಕ ನಿಂಗಪ್ಪ ನೇಣು ಹಾಕಿಕೊಂಡ ನೌಕರ.
ಬಾಗಲಕೋಟೆ(Bagalkot) ಜಿಲ್ಲೆಯ ಹುನಗುಂದ ತಾಲೂಕಿನ ರಾಮವಡಗಿ ಗ್ರಾಮದ ನಿಂಗಪ್ಪ ಕೆಎಸ್ಆರ್ಟಿಸಿ ಮಂಗಳೂರು ಘಟಕದಲ್ಲಿ ಕರ್ತವ್ಯದಲ್ಲಿದ್ದು, ಮಂಗಳೂರಿನ ಕುಂಟಿಕಾನ ಬಳಿಯ ಬಾಡಿಗೆ ಮನೆಯೊಂದರಲ್ಲಿ ಇಂದು ಸೆ.2) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೇಲಧಿಕಾರಿ ಕಿರುಕುಳ; ಆರೋಗ್ಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ
ಬಸ್ ತೆಗೆಯುವ ವಿಚಾರದಲ್ಲಿ ನಿರ್ಲಕ್ಷ್ಯ ಆರೋಪ ಹೊರಿಸಿ ನಿಂಗಪ್ಪ ಅವರನ್ನು ಕೆಲವು ದಿನಗಳ ಹಿಂದೆ ಅಮಾನತು ಮಾಡಲಾಗಿತ್ತು. ಹೀಗೆ ಅಮಾನತಾದ ಬಳಿಕ ನಿಂಗಪ್ಪ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಅವರು ಸಾಯಲು ಮೇಲಧಿಕಾರಿಗಳ ಕಿರುಕುಳವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಕೆಎಸ್ಆರ್ಟಿಸಿ ಟಿಸಿ ನಂದಕುಮಾರ್, ಡಿಟಿಒ ಕಮಲಾಕರ್ ಹಾಗೂ ಕೆಎಸ್ಆರ್ಟಿಸಿ ಡಿಸಿ ಅರುಣ್ ಕುಮಾರ್ ಅವರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದು, ಉರ್ವ ಪೊಲೀಸ್ ಠಾಣೆ ಎದುರು ಶವ ಇಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ