ಬೆಳಗಾವಿ: ಸೋಫಾಸೆಟ್‌ ಕೊಡಿಸಲಿಲ್ಲ ಎಂದು ವಿವಾಹಿತೆ ಆತ್ಮಹತ್ಯೆ!

Kannadaprabha News   | Asianet News
Published : Oct 22, 2020, 04:08 PM IST
ಬೆಳಗಾವಿ: ಸೋಫಾಸೆಟ್‌ ಕೊಡಿಸಲಿಲ್ಲ ಎಂದು ವಿವಾಹಿತೆ ಆತ್ಮಹತ್ಯೆ!

ಸಾರಾಂಶ

ಕಳೆದ ಹಲವು ದಿನಗಳ ಹಿಂದಷ್ಟೇ ತವರು ಮನೆಗೆ ಬಂದಿದ್ದ ಮೃತ ಜ್ಯೋತಿ| ಮದುವೆ ಆದಾಗಿನಿಂದ ಜ್ಯೋತಿ ತನ್ನ ತಂದೆ ಮುಂದೆ ಒಂದಿಲ್ಲೊಂದು ಬೇಡಿಕೆ ಇಡುತ್ತಿದ್ದ ವಿವಾಹಿತ ಮಹಿಳೆ| ಸೋಫಾಸೆಟ್‌ ಬೇಕು ಎಂದು ಹಠ ಹಿಡಿದಿದ್ದ ಜ್ಯೋತಿ| 

ಬೆಳಗಾವಿ(ಅ.22): ಪ್ರೀತಿಸಿ ಮದುವೆಯಾದ ಗಂಡನ ಮನೆಗೆ ಒಯ್ಯಲು ಸೋಫಾಸೆಟ್‌ ಕೊಡಿಸಲಿಲ್ಲ ಎಂದು ವಿವಾಹಿತೆಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಸುಳಗಾ ಗ್ರಾಮದ ಲಕ್ಷ್ಮೀ ಗಲ್ಲಿಯ ಜ್ಯೋತಿ ನಿಖಿಲ್‌ ಚೋಪಡೆ (19) ಆತ್ಮಹತ್ಯೆ ಮಾಡಿಕೊಂಡವಳು.

ಏನಾಯ್ತು?:

ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ನಿಖಿಲ್‌ ಎಂಬಾತನನ್ನು ಪ್ರೀತಿಸಿದ್ದ ಜ್ಯೋತಿಗೆ ಕಳೆದ ಐದು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಜ್ಯೋತಿ ಕಳೆದ ಹಲವು ದಿನಗಳ ಹಿಂದಷ್ಟೇ ತವರು ಮನೆಗೆ ಬಂದಿದ್ದಳು. ಮದುವೆ ಆದಾಗಿನಿಂದ ಜ್ಯೋತಿ ತನ್ನ ತಂದೆ ಮುಂದೆ ಒಂದಿಲ್ಲೊಂದು ಬೇಡಿಕೆ ಇಡುತ್ತಿದ್ದಳು. ಇತ್ತೀಚಿಗಷ್ಟೇ ತಂದೆಯಿಂದ ಕಾಡಿ ಬೇಡಿ ಫ್ರಿಡ್ಜ್‌ ಒಯ್ದಿದ್ದಳು. ಈಗ ಮತ್ತೆ ನನಗೆ ಸೋಫಾಸೆಟ್‌ ಬೇಕು ಎಂದು ಹಠ ಹಿಡಿದಿದ್ದಳು. ಇದಕ್ಕೆ ಆಕೆಯ ತಂದೆ ಹಣ ಬಂದ ಮೇಲೆ ಕೊಡಿಸುವುದಾಗಿ ಹೇಳಿದ್ದರಂತೆ. ಆದರೆ ತಾಳ್ಮೆ ಕಳೆದುಕೊಂಡ ಜ್ಯೋತಿ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮುಖ್ಯಮಂತ್ರಿ ಆಗುವ ಆಸೆ ಈಡೇರ​ದ್ದಕ್ಕೆ ಯುವಕ ನೇಣಿಗೆ ಶರಣು

ಘಟನಾ ಸ್ಥಳಕ್ಕೆ ಪೊಲೀಸ್‌ ಇನ್ಸಸ್ಪೆಕ್ಟರ್‌ ರಾಘವೇಂದ್ರ ಹಳ್ಳೂರ, ಪಿಎಸ್‌ಐ ಅವಿನಾಶ ಯರಗೊಪ್ಪ, ಅಪರಾಧ ವಿಭಾಗದ ಪಿಎಸ್‌ಐ ಆರ್‌.ಟಿ. ಲಕ್ಕನಗೌಡರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಕಾಕತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ