ವಿಜಯಪುರ: ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ವಿವಾಹಿತ ಮಹಿಳೆ ಲೈವ್ ಸೊಸೈಡ್..!

Published : Apr 26, 2023, 12:20 PM IST
ವಿಜಯಪುರ: ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ವಿವಾಹಿತ ಮಹಿಳೆ ಲೈವ್ ಸೊಸೈಡ್..!

ಸಾರಾಂಶ

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದ ಘಟನೆ. 

ವಿಜಯಪುರ(ಏ.26): ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ವಿವಾಹಿತ ಮಹಿಳೆಯೊಬ್ಬಳು ಮೊಬೈಲ್ ವಿಡಿಯೋ ಆನ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21)  ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. 

ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ವಿವಾಹಿತೆ ಮಹಿಳೆಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದನಂತೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಮನೆಯಲ್ಲಿ ಮಕ್ಕಳು ಸರ್ಕಾರಿ ಹುದ್ದೆ ಸೇರದ್ದಕ್ಕೆ ಮನನೊಂದ ತಂದೆ; ಸಾಯೋದಾಗಿ ವಾಟ್ಸಪ್ ಸ್ಟೇಟಸ್ ಇಟ್ಟು ಆತ್ಮಹತ್ಯೆ!

ಏಪ್ರಿಲ್ 15ರಂದು ವಿವಾಹಿತೆ ಸುಹಾನಾ ಆತ್ಮಹತ್ಯೆಗೆ ಕಾರಣ ತಿಳಿಸಿ ಮೊಬೈಲ್ ವಿಡಿಯೋ ಆನ್ ಮಾಡಿ ನೇಣಿಗೆ ಶರಣಾಗಿದ್ದಾಳೆ. ಉಪ್ಪಲದಿನ್ನಿ ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಸಲುಗೆ ಬೆಳೆಯಿಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್‌ಗೆ ತಾಕೀತು ಮಾಡಲಾಗಿತ್ತು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಕೊಡಲಾಗಿತ್ತು. 

ಇನ್ನೂಸ್ ಪಾರ್ಥನಲ್ಲಿ ಹಾಗೂ ದಸ್ತಗಿರಸಾಬ ಮುಳವಾಡ ಜೊತೆಗೆ ವಿವಾಹಿತೆ ತಂದೆ ಅಸ್ಲಂ ಮುಲ್ಲಾ ರಾಜಕೀಯ ದ್ವೇಷ ಇತ್ತು. ದಸ್ತಗಿರಸಾಬ ಮುಳವಾಡ ಮಗಳ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಕ್ಕೆ ಅಸ್ಲಂ ಮುಲ್ಲಾ ಕಾರಣವೆಂದು ಸಿಟ್ಟಾಗಿದ್ದರು. ಹೀಗಾಗಿ ಮೂವರು ಸೇರಿ ಸುಹಾನಾ ಬೆನ್ನುಹತ್ತಿ ಕಿರುಕುಳ ಕೊಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ಗಂಡನನ್ನು ಬಿಟ್ಟು ಬಾ ಇಲ್ಲವಾದರೆ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಸುಹಾನಾಳಿಗೆ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದನು. ಈ ಮೂವರು ಹೆಸರು ಹೇಳಿ ಸುಹಾನಾ ಆತ್ಮಹತ್ಯೆಗೆ ಶರಣಾಗಿದ್ದಳು. ಮೃತ ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ