ಬೆಂಗಳೂರು: ಬಾಳು ಕೊಡುವುದಾಗಿ ನಂಬಿಸಿ ಕ್ಯಾಬ್‌ ಚಾಲಕ ಮೋಸ, ಕಂಗಾಲಾದ ವಿವಾಹಿತ ಮಹಿಳೆ..!

Published : Aug 11, 2024, 10:26 AM IST
ಬೆಂಗಳೂರು: ಬಾಳು ಕೊಡುವುದಾಗಿ ನಂಬಿಸಿ ಕ್ಯಾಬ್‌ ಚಾಲಕ ಮೋಸ, ಕಂಗಾಲಾದ ವಿವಾಹಿತ ಮಹಿಳೆ..!

ಸಾರಾಂಶ

ಚಿತ್ರದುರ್ಗ ಮೂಲದ ನಿವಾಸಿ ಭೈರವಿ ಎಂಬಾಕೆ ಮಂಡ್ಯ ಮೂಲದ, ನಗರದ ಕೆಂಗೇರಿ ನಿವಾಸಿ ಕ್ಯಾಬ್ ಚಾಲಕ ಪ್ರಜ್ವಲ್ ಎಂಬಾತನ ವಿರುದ್ಧ ಮೋಸದ ಆರೋಪ ಮಾಡಿದ್ದಾರೆ. ಇಬ್ಬರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.   

ಬೆಂಗಳೂರು(ಆ.11): ಬಾಳು ಕೊಡುವುದಾಗಿ ನಂಬಿಸಿ ಕೆಲ ದಿನ ಜತೆಯಲ್ಲಿ ಇದ್ದು ಈಗ ಕೈಕೊಟ್ಟು ಹೋಗಿದ್ದಾನೆ ಎಂದು ಪ್ರಿಯಕರನ ವಿರುದ್ಧ ಆರೋಪಿಸಿರುವ ವಿವಾಹಿತ ಮಹಿಳೆಯೊಬ್ಬರು ನ್ಯಾಯಕ್ಕಾಗಿ ಕೆಂಗೇರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಚಿತ್ರದುರ್ಗ ಮೂಲದ ನಿವಾಸಿ ಭೈರವಿ ಎಂಬಾಕೆ ಮಂಡ್ಯ ಮೂಲದ, ನಗರದ ಕೆಂಗೇರಿ ನಿವಾಸಿ ಕ್ಯಾಬ್ ಚಾಲಕ ಪ್ರಜ್ವಲ್ ಎಂಬಾತನ ವಿರುದ್ಧ ಮೋಸದ ಆರೋಪ ಮಾಡಿದ್ದಾರೆ. ಇಬ್ಬರನ್ನು ಕರೆಸಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ಮಹಿಳೆ ಆರೋಪವೇನು?: 

ಚಿತ್ರದುರ್ಗ ಮೂಲದ ಭೈರವಿ 13 ವರ್ಷ ಹಿಂದೆ ಕರಿಯಣ್ಣ ಎಂಬುವವರನ್ನು ಮದುವೆಯಾಗಿದ್ದು, ದಂಪತಿಗೆ 12 ಮತ್ತು 10 ವರ್ಷದ ಇಬ್ಬರು ಮಕ್ಕಳು ಇದ್ದಾರೆ. ಪತಿ ಕರಿಯಣ್ಣ ಮದ್ಯ ವ್ಯಸನಕ್ಕೆ ಬಿದ್ದು ನಿತ್ಯ ಕಿರುಕುಳ ನೀಡುತ್ತಿದ್ದ. ಹಿಂಸೆ ಸಹಿಸಲಾಗದೆ ಪತಿಯನ್ನು ತೊರೆದ ಭೈರವಿ ತವರು ಮನೆಗೆ ಸೇರಿದ್ದರು. ವಿದ್ಯಾಭ್ಯಾಸದ ಹಿನ್ನೆಲೆಯಲ್ಲಿ ಮಗ ನನ್ನು ಹಾಸ್ಟೆಲ್‌ಗೆ ಸೇರಿಸಿ, ಮಗಳನ್ನು ತವರು ಮನೆಗೆ ಬಿಟ್ಟಿದ್ದಾರೆ. ಉದ್ಯೋಗ ಅರಸಿ ವರ್ಷದ ಹಿಂದೆ ಬೆಂಗಳೂರಿಗೆ ಬಂದಿರುವ ಭೈರವಿ, ಪೆಟ್ರೋಲ್ ಬಂಕ್‌ನಲ್ಲಿ ಕೆಲಸಕ್ಕೆ ಸೇರಿದ್ದರು.

ಬೆಂಗಳೂರು: ಬರ್ತ್‌ಡೇ ಖುಷಿಯಲ್ಲಿ ಗಾಂಜಾ ಸೇವಿಸಿ ಬೈಕ್‌ನಲ್ಲಿ ವ್ಹೀಲಿಂಗ್‌..!

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ: 

ಈ ನಡುವೆ ರೀಲ್ಸ್ ವಿಡಿಯೋ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದ ಭೈರವಿ, ರೀಲ್ಸ್ ವಿಡಿಯೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುತ್ತಿದ್ದರು. ಈಕೆಯ ರೀಲ್ಸ್ ನೋಡುತ್ತಿದ್ದ ಕ್ಯಾಬ್ ಚಾಲಕ ಪ್ರಜ್ವಲ್, ಲೈಕ್, ಕಾಮೆಂಟ್ ಮುಖಾಂತರ ಮೆಚ್ಚುಗೆ ವ್ಯಕ್ತಪಡಿಸಿದ್ದಾನೆ. ಬಳಿಕ ಇಬ್ಬರಿಗೂ ಪರಿಚಯವಾಗಿ ಮೊಬೈಲ್ ಸಂಖ್ಯೆ ಪಡೆದು ಕೊಂಡು ಪರಸ್ಪರ ಕಾಲ್, ಮೆಸೇಜ್ ಮಾಡಿ ಆತ್ಮೀಯರಾಗಿದ್ದಾರೆ. ಈ ವೇಳೆ ಭೈರವಿ ತನಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳು ಇರುವ ವಿಚಾರವನ್ನು ಪ್ರಜ್ವಲ್‌ಗೆ ಹೇಳಿಕೊಂಡಿದ್ದಾರೆ. ಆದರೂ ಬಾಳು ಕೊಡುವುದಾಗಿ ಪ್ರಜ್ವಲ್ ಹೇಳಿದ್ದಾನೆ. ಬಳಿಕ ಭೈರವಿ, ಪಜ್ವಲ್ ಒಂದೇ ಮನೆಯಲ್ಲಿ ವಾಸಿಸಲು ಆರಂಭಿಸಿದ್ದಾರೆ. ಪ್ರಿಯಕರ ಪ್ರಜ್ವಲ್ ಮನೆ ಬಿಟ್ಟು ಹೋಗಿ ದ್ದಾನೆ. ಸಂಪರ್ಕಕ್ಕೂ ಸಿಗದೆ ಮೋಸ ಮಾಡಿದ್ದಾನೆ ಎಂದು ಭೈರವಿ ಆರೋಪಿಸಿದ್ದಾರೆ.

ಮದುವೆ ವಿಚಾರ ಮುಚ್ಚಿಟ್ಟು ಲವ್

ಭೈರವಿ ನನಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಿತರಾಗಿದ್ದಳು. ತನಗೆ ಮದುವೆಯಾಗಿ ಮಕ್ಕಳಿರುವ ವಿಚಾರವನ್ನು ಮುಚ್ಚಿಟ್ಟಿದ್ದಳು. ಈ ವಿಚಾರ ಗೊತ್ತಾದ ಬಳಿಕ ಮೊದಲ ಗಂಡನಿಗೆ ಕಾನೂನುಬದ್ದವಾಗಿ ವಿಚ್ಚೇದನ ಕೊಡು. ಬಳಿಕ ನಾನು ಮದುವೆಯಾಗುತ್ತೇನೆ ಎಂದು ಹೇಳಿದ್ದೆ. ಗಂಡನಿಂದ ವಿಚ್ಛೇದನ ಪಡೆದು ಬರುವುದಾಗಿ ಹೇಳಿ ಹೋಗಿದ್ದ ಭೈರವಿ, ನೇರ ಮಾಧ್ಯಮಗಳ ಎದುರು ಬಂದು ತನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾಳೆ ಎಂದು ಪ್ರಜ್ವಲ್ ಪೊಲೀಸರ ಬಳಿ ಅಳಲು ತೋಡಿಕೊಂಡಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Bengaluru theft case: ಆಭರಣಗಳ ಫೋಟೋ ತೆಗೆವ ನೆಪದಲ್ಲಿ1.64 ಕೋಟಿ ಚಿನ್ನ ದೋಚಿದ್ದವರ ಸೆರೆ
ನಾಗ್ಪುರದಲ್ಲಿ ಬೆಚ್ಚಿಬೀಳಿಸುವ ಕೃತ್ಯ, ಏರ್ ಫೋರ್ಸ್ ಅಧಿಕಾರಿಯ ಪತ್ನಿ ಮೇಲೆ ಗ್ಯಾಂಗ್‌ನಿಂದ ದೌರ್ಜನ್ಯ: ಮತಾಂತರದ ವೀಡಿಯೋ ವೈರಲ್!