
ಕೂಡ್ಲಿಗಿ(ಜು.14): ಮದುವೆಯಾಗಿ 12 ವರ್ಷವಾಗಿದ್ದರೂ ಮಕ್ಕಳಾಗದಿದ್ದಕ್ಕೆ ಮಹಿಳೆಯೋರ್ವಳು ನೇಣಿಗೆ ಶರಣಾದ ಘಟನೆ ತಾಲೂಕಿನ ಈಚಲಬೊಮ್ಮನಹಳ್ಳಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಲಲಿತಮ್ಮ (36) ಎನ್ನುವ ಮಹಿಳೆಯೇ ಮನೆಯಲ್ಲಿ ನೇಣಿಗೆ ಶರಣಾದ ಗೃಹಿಣಿ. ಚಪ್ಪರದಹಳ್ಳಿ ಗ್ರಾಮದ ಲಲಿತಮ್ಮಳನ್ನು 12 ವರ್ಷಗಳ ಹಿಂದೆ ಈಚಲಬೊಮ್ಮನಹಳ್ಳಿಯ ನಾಗರಾಜಗೆ ಮದುವೆ ಮಾಡಿಕೊಡಲಾಗಿತ್ತು. ಲಲಿತಮ್ಮ ಮಕ್ಕಳಾಗದಿದ್ದಕ್ಕೆ ಅಲ್ಲಲ್ಲಿ ಚಿಕಿತ್ಸೆ ಪಡೆದುಕೊಂಡರೂ ಪ್ರಯೋಜನವಾಗಿಲ್ಲ. ಹೀಗಾಗಿ ಹಲವು ಬಾರಿ ನಾನು ಇದ್ದೇನು ಪ್ರಯೋಜನ ಸಾಯಬೇಕು ಎಂದು ಹೇಳುತ್ತಿದ್ದಳು.
ಬಸವನಬಾಗೇವಾಡಿ: ತಾಯಿ- ಮಗಳು ನದಿಗೆ ಹಾರಿ ಆತ್ಮಹತ್ಯೆ
ಗಂಡ ನಾಗರಾಜ ಸಹ ಮಕ್ಕಳಾಗದಿದ್ದಕ್ಕೆ ಕುಡಿತದ ಚಟಕ್ಕೆ ಅಂಟಿಕೊಂಡಿದ್ದನು. ಹೀಗಾಗಿ ಸರಿಯಾಗಿ ಮನೆಗೆ ಬರುತ್ತಿರಲಿಲ್ಲ. ಲಲಿತಮ್ಮ ಮನೆಯ ಬಾಗಿಲು ಚಿಲಕ ಹಾಕಿಕೊಂಡು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೋಮವಾರ ಬೆಳಗ್ಗೆ ಗಂಡ ಹಾಗೂ ಅಕ್ಕಪಕ್ಕದ ಮನೆಯವರು ಬಾಗಿಲು ಬಡಿದರೂ ಚಿಲಕ ತೆಗೆಯದಿದ್ದಕ್ಕೆ ಕಿಟಕಿಯಲ್ಲಿ ನೋಡಿದಾಗ ಲಲಿತಮ್ಮ ನೇಣುಹಾಕಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಮೃತಳ ಸಹೋದರಿ ನೀಡಿದ ದೂರಿನ ಮೇರೆಗೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ