ಕೂಡ್ಲಿಗಿ: ಋುತುಮತಿಯಾಗಿಲ್ಲವೆಂದು ನೇಣಿಗೆ ಶರಣಾದ ಗೃಹಿಣಿ

Kannadaprabha News   | Asianet News
Published : Jul 08, 2020, 08:57 AM ISTUpdated : Jul 08, 2020, 08:59 AM IST
ಕೂಡ್ಲಿಗಿ: ಋುತುಮತಿಯಾಗಿಲ್ಲವೆಂದು ನೇಣಿಗೆ ಶರಣಾದ ಗೃಹಿಣಿ

ಸಾರಾಂಶ

ಋುತುಮತಿಯಾಗಿಲ್ಲವೆಂದು ನೊಂದ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ| ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನಡೆದ ಘಟನೆ| 2 ವರ್ಷಗಳ ಹಿಂದೆ ಮದುವೆಯಾಗಿದ್ದ ಗೃಹಿಣಿ|

ಕೂಡ್ಲಿಗಿ(ಜು.08): 23 ವರ್ಷವಾದರೂ ಋುತುಮತಿಯಾಗಿಲ್ಲವೆಂದು ನೊಂದ ಗೃಹಿಣಿಯೋರ್ವಳು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಕೂಡ್ಲಿಗಿಯ ವೀಣಾ(23) ನೇಣಿಗೆ ಶರಣಾದ ಗೃಹಿಣಿಯಾಗಿದ್ದು ಈಕೆಯನ್ನು 2 ವರ್ಷಗಳ ಹಿಂದೆ ಸಂಡೂರು ತಾಲೂಕು ಬಂಡ್ರಿ ಗ್ರಾಮದ ರುದ್ರಮುನಿ ಎನ್ನುವವರಿಗೆ ಮದುವೆ ಮಾಡಿ ಕೊಡಲಾಗಿತ್ತು. ವೀಣಾ ಕೂಡ್ಲಿಗಿಯಲ್ಲಿಯೇ ಬಿಇಡಿ ವಿಧ್ಯಾಭ್ಯಾಸ ಮಾಡುತ್ತಿದ್ದಳು. 

ಬೈಲಹೊಂಗಲ: ಮಗನ ಕಿರುಕುಳಕ್ಕೆ ಬೇಸತ್ತು ತಾಯಿ ಆತ್ಮಹತ್ಯೆ

ತನಗೆ 23 ವರ್ಷವಾದರೂ ಇನ್ನೂ ಋುತುಮತಿಯಾಗಿಲ್ಲ. ಹೀಗಾಗಿ ಸಾಂಸಾರಿಕ ಜೀವನ ಸಾಗಿಸಲು ಸಾಧ್ಯವಿಲ್ಲವೆಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯಲ್ಲಿ ಯಾರು ಇಲ್ಲದಿರುವ ವೇಳೆ​ಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳ ತಾಯಿ ಗೌರಮ್ಮ ನೀಡಿದ ದೂರಿನ ಮೇರೆಗೆ ಕೂಡ್ಲಿಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!
ಬೆಂಗಳೂರು: ತಿಂಡಿ ಎಸೆದು ಪಾತ್ರೆಯಿಂದ ಹಲ್ಲೆ ಮಾಡಿದ ಪುಂಡರಿಗೆ ಕುದಿಯುವ ಎಣ್ಣೆ ಎರಚಿದ ವ್ಯಾಪಾರಿ!