
ಪೀಣ್ಯ ದಾಸರಹಳ್ಳಿ(ಜು.29): ಹಾಡಹಗಲೇ ಮುಸುಕುಧಾರಿಗಳಿಬ್ಬರು ಮಾರಕಾಸ್ತ್ರ ತೋರಿಸಿ ಮಹಿಳೆಯರನ್ನು ಅಡ್ಡಗಟ್ಟಿಚಿನ್ನದ ಮಾಂಗಲ್ಯ ಸರ ಕಸಿದು ಪರಾರಿಯಾದ ಘಟನೆ ಬೆಂಗಳೂರು ಉತ್ತರ ತಾಲೂಕು ಹೊಟ್ಟಪ್ಪನಪಾಳ್ಯ ಗ್ರಾಮದಲ್ಲಿ ನಡೆದಿದೆ.
ಹೊಟ್ಟಪ್ಪನಪಾಳ್ಯದ ನಿವಾಸಿ ಶಕುಂತಲಾ ಮತ್ತು ಕವಿತಾ ಎಂಬುವರು ತಮ್ಮ ದ್ವಿಚಕ್ರ ವಾಹನದಲ್ಲಿ ಧರ್ಮಸ್ಥಳ ಸಂಘದ ಕಚೇರಿಗೆ ಸಹಿಯನ್ನು ಹಾಕಿ ಬರುತ್ತಿದ್ದರು. ಈ ಸಂದರ್ಭದಲ್ಲಿ ಹಿಂಬದಿಯಿಂದ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಮಹಿಳೆಯನ್ನು ಅಡ್ಡಗಟ್ಟಿ ಲಾಂಗ್ ತೋರಿಸಿ ಸುಮಾರು 2 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಸಿದು ಕ್ಷಣಾರ್ಧದಲ್ಲಿ ಪರಾರಿ ಆಗಿದ್ದಾರೆ.
ಫೋನ್ ಕಳ್ಳತನದ ದೂರು ಕೊಡಲು ಹೋಗುವಾಗ ಬೈಕ್ ಕದ್ದ ಖದೀಮರು!
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶೇಷ ತಂಡ ರಚಿಸಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ