ಬೀದರ್‌: ಎಸ್‌ಬಿಐ ಎಟಿಎಂನಲ್ಲಿ ಭಾರೀ ಕಳ್ಳತನ

Published : Dec 15, 2023, 10:30 PM IST
ಬೀದರ್‌: ಎಸ್‌ಬಿಐ ಎಟಿಎಂನಲ್ಲಿ ಭಾರೀ ಕಳ್ಳತನ

ಸಾರಾಂಶ

ತೋರಣಾದಲ್ಲಿ ಬ್ಯಾಂಕಿನ ಹಿಂಬದಿ ಕಿಟಕಿ ಮುರಿದು ಒಳನುಗ್ಗಿ 18.63ಲಕ್ಷ ರು. ನಗದು ದೋಚಿದ್ದರೆ ಚಿಟಗುಪ್ಪದಲ್ಲಿನ ಎಸ್‌ಬಿಐ ಬ್ಯಾಂಕಿನ ಎಟಿಎಂ ಕೊರೆದು ಅದರಲ್ಲಿದ್ದ 7.61ಲಕ್ಷ ರು. ಕಳ್ಳತನ

ಬೀದರ್‌(ಡಿ.15):  ಜಿಲ್ಲೆಯ ಎರೆಡೆರೆಡು ಕಡೆಗಳಲ್ಲಿ ಕಳ್ಳರು ಕೆಲ ಗಂಟೆಗಳ ಅಂತರದಲ್ಲಿಯೇ ಜಿಲ್ಲೆಯ ಎರಡು ರಾಷ್ಟ್ರೀಕೃತ ಬ್ಯಾಂಕ್‌ನ ಲಕ್ಷಾಂತರ ರುಪಾಯಿ ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದ್ದು, ತೋರಣಾದಲ್ಲಿ ಬ್ಯಾಂಕಿನ ಹಿಂಬದಿ ಕಿಟಕಿ ಮುರಿದು ಒಳನುಗ್ಗಿ 18.63ಲಕ್ಷ ರು. ನಗದು ದೋಚಿದ್ದರೆ ಚಿಟಗುಪ್ಪದಲ್ಲಿನ ಎಸ್‌ಬಿಐ ಬ್ಯಾಂಕಿನ ಎಟಿಎಂ ಕೊರೆದು ಅದರಲ್ಲಿದ್ದ 7.61ಲಕ್ಷ ರು.ಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಬುಧವಾರ ತಡರಾತ್ರಿ ಕಮಲನಗರ ತಾಲೂಕಿನ ತೋರಣಾ ಗ್ರಾಮದ ಭಾರತೀಯ ಸ್ಟೇಟ್‌ ಬ್ಯಾಂಕ್‌ ಶಾಖೆಯ ಕಿಟಕಿ ಮುರಿದು ಒಳನುಗ್ಗಿ ಲಕ್ಷಾಂತರ ರುಪಾಯಿ ನಗದು ಹಾಗೂ ಚಿನ್ನದ ಆಭರಣಗಳನ್ನು ಸೇಫ್‌ ಲಾಕರ್‌, ಎಟಿಎಂನಿಂದ ಕಳುವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸಂತಾನ ಇಲ್ಲವೆಂದು ಮಕ್ಕಳಕಿಡ್ನಾಪ್‌ ಮಾಡಿದ ದಂಪತಿ!

ತೋರಣಾದಲ್ಲಿನ ಎಸ್‌ಬಿಐ ಬ್ಯಾಂಕಿನ ಕಿಟಕಿ ಕತ್ತರಿಸಿ ಒಳಗೆ ಪ್ರವೇಶಿಸಿ ಸಿಸಿ ಕ್ಯಾಮರಾ ಮತ್ತು ವಿದ್ಯುತ್‌ ದೀಪಗಳನ್ನು ಆರಿಸಿ ಬ್ಯಾಂಕಿನ ತಿಜೋರಿಯನ್ನು ಗ್ಯಾಸ್‌ ಕಟರ್‌ ಹಾಗೂ ಹಾರಿಯಿಂದ ಕತ್ತರಿಸಿ, ಅದರಲ್ಲಿದ್ದ 18,36,793ರು.ಗಳನ್ನು ಹಾಗೂ ಬ್ಯಾಂಕಿನ ಒಂದು ಲಾಕರ್‌ ಒಡೆದು ಅದರಲ್ಲಿದ್ದ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಕುರಿತಂತೆ ಕಮಲನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಇನ್ನು ಚಿಟಗುಪ್ಪ ಪಟ್ಟಣದ ಗೌಂಧಿಚೌಕ್‌ ಭವಾನಿ ಮಂದಿರದ ಮಾರ್ಗದಲ್ಲಿರುವ ಎಸ್‌ಬಿಐನ ಡಿಪಾಸಿಟ್‌ ಮತ್ತು ವಿತ್‌ಡ್ರಾ ಎಟಿಎಂ ಯಂತ್ರವನ್ನು ಗುರುವಾರ ನಸುಕಿನ ಜಾವ 4ರಿಂದ 6ರ ಹೊತ್ತಿನಲ್ಲಿ ಎಟಿಎಂ ಕೇಂದ್ರದ ಶಟರ್‌ ಹಾಗೂ ಯಂತ್ರವನ್ನು ಗ್ಯಾಸ್‌ ಕಟರ್‌ ಯಂತ್ರದಿಂದ ಕತ್ತರಿಸಿ ಅದರಲ್ಲಿದ್ದ 7,61,500ರು.ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.

ಸದರಿ ಘಟನಾ ಸ್ಥಳಗಳಿಗೆ ಜಿಲ್ಲಾ ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ಮತ್ತು ಸುಕೋ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕಿರುತ್ತಾರೆ. ಈ ಕುರಿತಂತೆ ಚಿಟಗಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌ ತಿಳಿಸಿದ್ದಾರೆ.

ಕಮಲನಗರ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್‌, ಸಿಪಿಐ ರಘುವೀರಸಿಂಗ್‌ ಠಾಕೂರ್‌ ಸೇರಿ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬುಡುಬುಡಿಕೆ ಭವಿಷ್ಯದ ನೆಪದಲ್ಲಿಮಹಿಳೆಯ ಪ್ರಜ್ಞೆ ತಪ್ಪಿಸಿ ಸರಗಳ್ಳತನ!

ತೋರಣಾ ಬ್ಯಾಂಕ್‌ ಕಳ್ಳತನಕ್ಕೆ ಗ್ಯಾಸ್‌ ಸಿಲೆಂಡರ್‌ ಬಳಸಿ ಹಾಗೂ ಕಿಟಕಿಯ ಸಲಾಕೆ ಕತ್ತರಿಸಿ ಒಳ ನುಗ್ಗಿ ಸಿಸಿ ಕ್ಯಾಮರಾವನ್ನು ರಾತ್ರಿ 12.55 ನಿಮಿಷಕ್ಕೆ ನಿಲ್ಲಿಸಿದ್ದಾರೆ ಎಂದು ಬ್ಯಾಂಕಿನ ವ್ಯವಸ್ಥಾಪಕ ಭರತಕುಮಾರ್ ಬಿ ತಿಳಿಸಿದ್ದಾರೆ.
ಬ್ಯಾಂಕಿನ ಪಕ್ಕದಲ್ಲಿರುವ ಎಟಿಎಂನಲ್ಲಿ ಸುಮಾರು 28ಲಕ್ಷ ರುಪಾಯಿ ಇದ್ದವು ಅದನ್ನೂ ಕಳ್ಳತನ ಮಾಡಲು ಯತ್ನಿಸಿದ್ದಾರೆ. ಆದರೆ ಅದು ವಿಫಲವಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಮಹೇಶ ಮೇಘಣ್ಣನವರ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಮಲನಗರ ಪೊಲೀಸ್‌ ಠಾಣೆ ಪಿಎಸ್‌ಐ ಚಂದ್ರಶೇಖರ ನಿರ್ಣೆ ಭೇಟಿ ನೀಡಿದರು. ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಭಾಲ್ಕಿ ಗ್ರಾಮೀಣ ಸಿಪಿಐ ಜಿಎಸ್‌ ಬಿರಾದಾರ, ಔರಾದ್‌ ಸಿಪಿಐ ರಘುವೀರಸಿಂಗ್‌ ಠಾಕೂರ, ಪಿಎಸ್‌ಐಗಳಾದ ಪ್ರಭಾಕರ ಪಾಟೀಲ್‌ ಬೀದರ್‌ ನಗರ, ಉಪೇಂದ್ರ ಔರಾದ್‌, ಬೆರಳಚ್ಚು ಪಿಎಸ್‌ಐ ಸಂತೋಷ ಹಾಗೂ ಜಿಲ್ಲೆಯ ಅಪರಾಧ ತಂಡದ ಸಿಬ್ಬಂದಿ ವರ್ಗದವರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು