ಬೀದರ್‌: ಹಾಸ್ಟೆಲ್ ಮೇಲಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

Published : Feb 28, 2023, 10:28 AM ISTUpdated : Feb 28, 2023, 10:42 AM IST
ಬೀದರ್‌: ಹಾಸ್ಟೆಲ್ ಮೇಲಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಸಾರಾಂಶ

ಆತ್ಮಹತ್ಯೆಗೆ ಶರಣಾದ ಶ್ರೀರಾಮ್ ಬೀದರ್ ನಗರದ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ.  ಶ್ರೀರಾಮ್ ಮೂಲತಃ ಬೀದರ್ ಜಿಲ್ಲೆಯ ಚಿಟ್ಟಗುಪ್ಪಾ ತಾಲ್ಲೂಕಿನವನು ಅಂತ ತಿಳಿದು ಬಂದಿದೆ. ಶ್ರೀರಾಮ್ ಎಂಬಿಬಿಎಸ್‌ನಲ್ಲಿ ಟಾಪರ್‌ ಆಗಿದ್ದ ವಿದ್ಯಾರ್ಥಿ. 

ಬೀದರ್(ಫೆ.28): ಬ್ರಿಮ್ಸ್ ಹಾಸ್ಟೆಲ್ ಮೇಲಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಇಂದು(ಮಂಗಳವಾರ) ನಡೆದಿದೆ. ಶ್ರೀರಾಮ್(22) ಎಂಬಾತನೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. 

ಎಂಬಿಬಿಎಸ್‌ ಪ್ರಾಕ್ಟಿಕಲ್ ಎಕ್ಸಾಂ ಭಯದಲ್ಲಿ ಶ್ರೀರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಹೇಳಲಾಗುತ್ತಿದೆ. ಆದರೆ, ಮತ್ತೊಂದೆಡೆ ತಂದೆ ಸಾವಿನಿಂದ ಶ್ರೀರಾಮ್ ಮಾನಸಿಕವಾಗಿ ಕುಗ್ಗಿ ಹೋಗಿದ್ದನು ಅಂತ ಹೇಳಲಾಗುತ್ತಿದೆ. ಶ್ರೀರಾಮ್ ಸಾವಿಗೆ ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. 

ಬೆಂಗಳೂರು: ಪತ್ನಿ ಜೊತೆ ಜಗಳ, ಮರಕ್ಕೆ ಪಂಚೆ ಬಿಗಿದು ಕುಡುಕ ಪತಿ ಆತ್ಮಹತ್ಯೆ

ಆತ್ಮಹತ್ಯೆಗೆ ಶರಣಾದ ಶ್ರೀರಾಮ್ ಬೀದರ್ ನಗರದ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ.  ಶ್ರೀರಾಮ್ ಮೂಲತಃ ಬೀದರ್ ಜಿಲ್ಲೆಯ ಚಿಟ್ಟಗುಪ್ಪಾ ತಾಲ್ಲೂಕಿನವನು ಅಂತ ತಿಳಿದು ಬಂದಿದೆ. ಶ್ರೀರಾಮ್ ಎಂಬಿಬಿಎಸ್‌ನಲ್ಲಿ ಟಾಪರ್‌ ಆಗಿದ್ದ ವಿದ್ಯಾರ್ಥಿ. 

ಶ್ರೀರಾಮ್ ಸಾವಿಗೆ ಸಹ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ. ಘಟನಾ ಸ್ಥಳಕ್ಕೆ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು