ಪುರುಷತ್ವ, ಮರ್ಮಾಂಗ ಸೇರಿದಂತೆ ಅತ್ಯಾಚಾರಿಗಳಿಗೆ ನಡೆಸುವ ವೈದ್ಯಕೀಯ ಪರೀಕ್ಷೆಗೆ ಪ್ರಜ್ವಲ್ ರೇವಣ್ಣ

Published : Jun 15, 2024, 12:42 PM ISTUpdated : Jun 15, 2024, 01:47 PM IST
ಪುರುಷತ್ವ, ಮರ್ಮಾಂಗ  ಸೇರಿದಂತೆ ಅತ್ಯಾಚಾರಿಗಳಿಗೆ ನಡೆಸುವ ವೈದ್ಯಕೀಯ ಪರೀಕ್ಷೆಗೆ ಪ್ರಜ್ವಲ್ ರೇವಣ್ಣ

ಸಾರಾಂಶ

ಈ ವಿಡಿಯೋದಲ್ಲಿ ಪುರುಷನೊಬ್ಬನ ಧ್ವನಿ ಮತ್ತು  ಸೊಂಟದ ಕೆಳಗಿನ ಭಾಗ ಕಾಣಿಸುತ್ತಿತ್ತು. ಈ ಹಿನ್ನೆಲೆ ವಿಡಿಯೋದಲ್ಲಿ ನಗ್ನವಾಗಿ ಕಾಣಿಸಿದ ವ್ಯಕ್ತಿಯ ಪತ್ತೆಗೆ ಪೊಲೀಸರು ಮುಂದಾಗಿದೆ. 

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇಂದು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಆರೋಪಿಯನ್ನು ಎಸ್‌ಐಟಿ ಪೊಲೀಸರು ಆಸ್ಪತ್ರೆಗೆ ಕರೆತಂದಿದ್ದಾರೆ. ಇಂದು ಪುರುಷತ್ವ ಸೇರಿದಂತೆ ಅತ್ಯಾಚಾರ ಆರೋಪಿಗಳಿಗೆ ನಡೆಸುವ ಎಲ್ಲಾ ವೈದ್ಯಕೀಯ ಪರೀಕ್ಷೆಯನ್ನು ಪ್ರಜ್ವಲ್ ರೇವಣ್ಣಗೆ ನಡೆಸಲಾಗುತ್ತದೆ. ಈಗಾಗಲೇ‌ ಮೊದಲ ಪ್ರಕರಣದಲ್ಲಿಯೂ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ ನಡೆದಿತ್ತು. ಈಗ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಪ್ರಜ್ವಲ್‌ ರೇವಣ್ಣದ್ದು ಎನ್ನಲಾದ ವಿಡಿಯೋಗಳು ಹಾಸನ ಸೇರಿದಂತೆ ರಾಜ್ಯಾದ್ಯಂತ ಹರಿದಾಡಿದ್ದವು.  ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪೆನ್‌ಡ್ರೈವ್ ಮೂಲಕ ವಿಡಿಯೋಗಳು ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಡಿಯೋದಲ್ಲಿ ಪುರುಷನೊಬ್ಬನ ಧ್ವನಿ ಮತ್ತು  ಸೊಂಟದ ಕೆಳಗಿನ ಭಾಗ ಕಾಣಿಸುತ್ತಿತ್ತು. ಈ ಹಿನ್ನೆಲೆ ವಿಡಿಯೋದಲ್ಲಿ ನಗ್ನವಾಗಿ ಕಾಣಿಸಿದ ವ್ಯಕ್ತಿಯ ಪತ್ತೆಗೆ ಪೊಲೀಸರು ಮುಂದಾಗಿದೆ. 

ವಿದೇಶದಲ್ಲಿದ್ದಾಗ ಪ್ರಜ್ವಲ್‌ ರೇವಣ್ಣಗೆ ಹಣ ಕಳಿಸಿದ್ದ ಗೆಳತಿಗೆ ಸಂಕಷ್ಟ: ಎಸ್‌ಐಟಿ ನೋಟಿಸ್

ಪ್ರಜ್ವಲ್ ರೇವಣ್ಣಗೆ ಅಂಗಾಂಗ ಪರೀಕ್ಷೆ?

ವಿಡಿಯೋದಲ್ಲಿ ಕಾಣಿಸಿದ ಪುರುಷನ ಅಂಗಾಂಗಳೊಂದಿಗೆ ಪ್ರಜ್ವಲ್ ರೇವಣ್ಣ ಅಂಗಗಳನ್ನು ಹೋಲಿಕೆ ಮಾಡಲು ಅಧಿಕಾರಿಗಳ ತಂಡ ಚಿಂತನೆ ನಡೆಸಿದೆ. ಈ ಪರೀಕ್ಷೆಗೆ ಗುಜರಾತ್ ರಾಜ್ಯದ ಅಹಮದಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ ಎಸ್ಎಲ್) ಹಾಗೂ ವಿದೇಶಿ ತಜ್ಞರ ನೆರವು ಪಡೆದುಕೊಳ್ಳಲು ಎಸ್‌ಐಟಿ ತಂಡ ಮುಂದಾಗಿದೆ ಎಂದು ವರದಿಯಾಗಿದೆ. ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಆರೋಪಿಯ ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿನ ಮುಖ ಮಾಚಿಕೊಂಡಿರುವ ವ್ಯಕ್ತಿ ಪತ್ತೆಗೆ ಎಸ್‌ಐಟಿ ಅಂಗಾಂಗ ಪರೀಕ್ಷೆಗೆ ಎಸ್‌ಐಟಿ ಮುಂದಾಗಿದೆ.

ಭವಾನಿ ರೇವಣ್ಣ ಬಂಧನಕ್ಕೆ ಅನುಮತಿ ಕೇಳಿದ ಎಸ್‌ಐಟಿ 

ಕೆಆರ್ ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಬಂಧನಕ್ಕೆ ಅನುಮತಿ ಕೇಳಿ ಎಸ್‌ಐಟಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದಿ ನ್ಯಾಯಾಲಯ  ಅರ್ಜಿಯ ತೀರ್ಪು ಪ್ರಕಟಿಸುವವರೆಗೂ ಭವಾನಿ ರೇವಣ್ಣ ಅವರನ್ನು ಬಂಧಿಸಬಾರದು ಎಂದು ಸೂಚಿಸಿ ಜೂ.7ರಂದು ಹೊರಡಿಸಿದ ಮಧ್ಯಂತರ ಅದೇಶವನ್ನು ವಿಸ್ತರಿಸಿ ಆದೇಶಿಸಿತು.

ಪ್ರಜ್ವಲ್ ರೇವಣ್ಣ ಎಸ್‌ಐಟಿ ತನಿಖೆಯಲ್ಲಿ ಮಧ್ಯಪ್ರವೇಶ ಬೇಕಿಲ್ಲ: ಹೈಕೋರ್ಟ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಾಗ್ಪುರದಲ್ಲಿ ಬೆಚ್ಚಿಬೀಳಿಸುವ ಕೃತ್ಯ, ಏರ್ ಫೋರ್ಸ್ ಅಧಿಕಾರಿಯ ಪತ್ನಿ ಮೇಲೆ ಗ್ಯಾಂಗ್‌ನಿಂದ ದೌರ್ಜನ್ಯ: ಮತಾಂತರದ ವೀಡಿಯೋ ವೈರಲ್!
ಬುರುಡೆ ಗ್ಯಾಂಗ್‌ನಿಂದ ಜೀವ ಬೆದರಿಕೆಯಿದೆ: ಮಾಸ್ಕ್‌ಮ್ಯಾನ್ ಚಿನ್ನಯ್ಯ ಆರೋಪ! ಅಷ್ಟಕ್ಕೂ SIT ಗೆ ಸಲ್ಲಿಸಿದ ದೂರಿನಲ್ಲಿ ಏನಿದೆ?