ಅಂಗವೈಕಲ್ಯ ಪ್ರಮಾಣ ಪತ್ರ ನೀಡಲು ₹1500 ಲಂಚಕ್ಕೆ ಬೇಡಿಕೆ; ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್‌ ಲೋಕಾಯುಕ್ತ ಬಲೆಗೆ

Published : Aug 13, 2025, 09:04 AM IST
eggana Hospital Clerk Caught in Lokayukta Sting for ₹1500 Bribe

ಸಾರಾಂಶ

ಸಾಗರ ತಾಲೂಕಿನ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಂಗವೈಕಲ್ಯ ಪ್ರಮಾಣಪತ್ರ ನೀಡಲು ಲಂಚ ಪಡೆಯುತ್ತಿದ್ದ ಕ್ಲರ್ಕ್ ನೀಲಕಂಠೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 1,500 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ (ಆ.13): ಅಂಗವೈಕಲ್ಯ ಪ್ರಮಾಣ ಪತ್ರ ನೀಡಲು 1,500 ರೂ. ಲಂಚ ಪಡೆಯುತ್ತಿದ್ದ ವೇಳೆ ಸಾಗರ ತಾಲೂಕಿನ ಮೆಗ್ಗಾನ್ ಆಸ್ಪತ್ರೆಯ ಕ್ಲರ್ಕ್ ಕ್ಲರ್ಕ್ ನೀಲಕಂಠೇಗೌಡ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಅಂದಾಸುರ ಗ್ರಾಮದ ನಿವಾಸಿಯೊಬ್ಬರು ತಮ್ಮ 8 ವರ್ಷದ ಪುತ್ರಿಗೆ ಅಂಗವೈಕಲ್ಯ ಪ್ರಮಾಣಪತ್ರ ಪಡೆಯಲು ಆಸ್ಪತ್ರೆಯಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದರು. 15 ದಿನಗಳ ಹಿಂದೆ ಹೊರರೋಗಿಗಳ ವಿಭಾಗದಲ್ಲಿ ನೋಂದಣಿ ಮಾಡಿಸಿ, ವೈದ್ಯರಿಂದ ತಪಾಸಣೆಗೊಳಪಡಿಸಿದ್ದರು. ತಪಾಸಣೆ ಬಳಿಕ ಅಗತ್ಯ ದಾಖಲೆಗಳನ್ನು ನೀಲಕಂಠೇಗೌಡರಿಗೆ ಸಲ್ಲಿಸಿದ್ದರು. ಆದರೆ, ಪ್ರಮಾಣಪತ್ರ ನೀಡಲು 1,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ. ಲಂಚಕ್ಕಾಗಿ ಉದ್ದೇಶಪೂರ್ವಕವಾಗಿ ದಾಖಲೆಗಳನ್ನು ಮುಂದೂಡುತ್ತಿದ್ದರು. ಈ ಕುರಿತು ಒತ್ತಡಕ್ಕೊಳಗಾದ ದೂರುದಾರರು ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿದರು.

ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಮತ್ತು ಇನ್ಸ್ಪೆಕ್ಟರ್ ವೀರಬಸಪ್ಪ ಎಲ್ ಕುಸಲಾಪುರ ನೇತೃತ್ವದಲ್ಲಿ ಯೋಜಿತ ಕಾರ್ಯಾಚರಣೆ ನಡೆಸಲಾಯಿತು. ಮೆಗ್ಗಾನ್ ಆಸ್ಪತ್ರೆಯ ಕಚೇರಿಯಲ್ಲಿ ನೀಲಕಂಠೇಗೌಡ 1,500 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದರು. ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ತನಿಖೆ ಆರಂಭಿಸಿದ್ದಾರೆ.

ಈ ಘಟನೆಯು ಸರ್ಕಾರಿ ಆಸ್ಪತ್ರೆಗಳಲ್ಲಿ ಲಂಚದ ಕಾಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಲೋಕಾಯುಕ್ತ ಪೊಲೀಸರ ಈ ಕಾರ್ಯಾಚರಣೆಯನ್ನು ಸ್ವಾಗತಿಸಿರುವ ನಾಗರಿಕರು, ಇಂತಹ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಮತ್ತಷ್ಟು ಕಠಿಣ ಕ್ರಮಗಳನ್ನು ಕೋರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ