
ಮೈಸೂರು(ಜೂ. 20) ಕತ್ತು ಕೊಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆಗೆ ಯತ್ತಿಸಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ಘಟನೆ ನಡೆದಿದೆ.
ಶಿವಣ್ಣ (42) ವರ್ಷ ಮೃತ ದುರ್ದೈವಿ. ಘಟನೆ ಬಳಿಕ ಕೆ ಆರ್ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಶಿವಣ್ಣ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೈಸೂರಿನ ಆಸ್ಪತ್ರೆಗೆ ಕರೆದೋಯ್ಯುವ ವೇಳೆ ಆಂಬುಲೆನ್ಸ್ ನಿಂದ ಜಿಗಿದು ಕುಳಿತಿದ್ದನ್ನು ಕಂಡು ಜನ ಗಾಬರಿಗೆ ಒಳಗಾದರು. ಟಿ. ನರಸೀಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಮಾನಸಿಕ ಅಸ್ವಸ್ಥ ಇಂಥ ನಿರ್ಧಾರ ತೆಗೆದುಕೊಂಡ ಎನ್ನುವುದು ಗೊತ್ತಾಗಿಲ್ಲ.
ಇಲಿ ಪಾಷಾಣ ತಿಂದು ಮೃತಪಟ್ಟ ಮಗು, ಪೋಷಕರೇ ಎಚ್ಚರ
ಆಘಾತದಿಂದ ತಂದೆ ಸಾವು; ಮಗಳ ಆತ್ಮಹತ್ಯೆ ನಂತರ ಮನನೊಂದ ತಂದೆಯೂ ಸಾವನ್ನಪ್ಪಿದ್ದಾರೆ. ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದಲ್ಲಿ ದಾರುಣ ಘಟನೆ ನಡೆದಿದೆ.
ಪುತ್ರಿ ಬಾಂಧವ್ಯ (17), ರಾಜು (65) ಸಾವಿಗೀಡಾದ ತಂದೆ ಮಗಳು. ಪ್ರತಿಭಾನ್ವಿತೆಯಾಗಿದ್ದ ಮಗಳ ಸಾವಿನಿಂದ ತಂದೆಗೆ ಆಘಾತವಾಗಿದೆ. ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 92 ಅಂಕ ಪಡೆದಿದ್ದ ಮಗಳೂ ಬನ್ನೂರು ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
ರಾಜು ಅವರ ನಾಲ್ಕು ಮಂದಿ ಹೆಣ್ಣು ಮಕ್ಕಳ ಪೈಕಿ ಮೂರು ಹೆಣ್ಣು ಮಕ್ಕಳು ಈಗಾಗಲೇ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಬಾಂಧವ್ಯ ಈ ವರ್ಷ 10 ನೇ ತರಗತಿಯಲ್ಲಿ ಉತ್ತಿರ್ಣಳಾಗಿದ್ದಾಳೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಹಣಕಾಸಿನ ತೊಂದರೆ ಉಂಟಾದ ಪರಿಣಾಮ ಮಗಳನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ದಾಖಲು ಮಾಡಲು ಪೋಷಕರು ಮಾತುಕತೆ ನಡೆಸಿದ್ದಾರೆ.
ಆದರೆ ಕೊನೆ ಮಗಳು ಬಾಂಧವ್ಯ ಎಲ್ಲಾ ಅಕ್ಕಂದಿರನ್ನು ಖಾಸಗಿ ಪದವಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿಸುತ್ತಿದ್ದಿರಿ ನನ್ನನ್ನು ಮಾತ್ರ ಸರ್ಕಾರಿ ಕಾಲೇಜಿಗೆ ಸೇರಿಸುತ್ತಿದ್ದಿರಿ. ಎಂದು ಮನೆಯಲ್ಲಿ ಗಲಾಟೆ ಮಾಡಿಕೊಂಡಿದ್ದಳು ಎನ್ನಲಾಗಿದೆ.
ಈ ಘಟನೆಯಿಂದ ಬೇಸತ್ತು ಬಾಂಧವ್ಯ ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಬಗ್ಗೆ ಮಾಹಿತಿ ತಿಳಿದ ಅಪ್ಪ ರಾಜಣ್ಣ ಆಘಾತಗೊಂಡರು. ಅವರಿಗೂ ಲೋ ಬಿಪಿ ಆಗಿದೆ. ತಕ್ಷಣವೇ ಅವರನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದರೊಳಗೆ ರಾಜಣ್ಣ ಕೂಡ ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ತಂದೆ , ಮಗಳ ಅಂತ್ಯಕ್ರಿಯೆ ತಗಳವಾದಿ ಗ್ರಾಮದಲ್ಲಿ ನಡೆಯಿತು. ವಿಶ್ವ ತಂದೆಯರ ದಿನದಂದೆ ತಂದೆ-ಮಗಳು ಕೊನೆಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ