ವಿಜಯಪುರ:ಪ್ರಿಯಕರನೊಂದಿಗೆ ಓಡಿ ಹೋದ ಅಪ್ರಾಪ್ತ ವಯಸ್ಸಿನ ಮಗಳು ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮನನೊಂದು ತಂದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಭೈರವಾಡಗಿ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ನಾಪತ್ತೆಯಾದ ಮಗಳನ್ನು ಪೊಲೀಸರು ಪತ್ತೆ ಮಾಡಿಲ್ಲವೆಂದು ಮನನೊಂದು ತಂದೆ ಸಾವಿಗೆ ಶರಣಾಗಿದ್ದಾರೆ.
44 ವರ್ಷ ಪ್ರಾಯದ ಗಂಗಾಧರ ಬಡಿಗೇರ (Gangadhara Badigera) ಆತ್ಮಹತ್ಯೆ ಮಾಡಿಕೊಂಡವರು. ಇವರು ಸಾರಿಗೆ ಇಲಾಖೆ ನೌಕರರಾಗಿದ್ದು (employee of the transport department), ಗ್ರಾಮದ ಹೊರ ಭಾಗದ ಕೆನಾಲ್ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಗಂಗಾಧರ ಅವರ ಅಪ್ರಾಪ್ತ ವಯಸ್ಸಿನ ಮಗಳು ಪ್ರಿಯಕರನ ಜೊತೆಗೆ ಓಡಿ ಹೋಗಿದ್ದಳು. ಅದೇ ಗ್ರಾಮದ ಸಂತೋಷ ಪಟ್ಟೇದ (24) ಎಂಬ ಯುವಕನೊಂದಿಗೆ ಆಕೆ ಮನೆ ಬಿಟ್ಟು ಹೋಗಿದ್ದಳು.
ಮಗಳು ಹೋದ ಬಳಿಕ ಎಷ್ಟೇ ಹುಡುಕಾಡಿದರೂ ಆಕೆ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ (Bagewadi Police Station) ತಂದೆ ದೂರು ದಾಖಲಿಸಿದ್ದರು. ದೂರು ನೀಡಿದ್ದರೂ ಇಲ್ಲಿಯವರೆಗೆ ಗಂಗಾಧರ ಬಡಿಗೇರ ಅವರ ಅಪ್ರಾಪ್ತ ವಯಸ್ಸಿನ ಮಗಳ ಪತ್ತೆಯಾಗಿರಲಿಲ್ಲ. ಹಲವಾರು ಬಾರಿ ಠಾಣೆಗೆ ಅಲೆದಾಡಿದ್ದರೂ ಉಪಯೋಗವಾಗಿರಲಿಲ್ಲ ಮಗಳು ಓಡಿ ಹೋದ ಅವಮಾನದ ಜೊತೆ ಪೊಲೀಸರು ಆಕೆಯನ್ನು ಪತ್ತೆ ಮಾಡಲಿಲ್ಲ ಎಂದು ಮನನೊಂದಿದ್ದ ಗಂಗಾಧರ ಬಡಿಗೇರ ಇಂದು ಕೆರೆಗೆ ಹಾರಿ ಆತ್ಮಹತ್ಯೆ (committed suicide) ಮಾಡಿಕೊಂಡಿದ್ದು,
ಅಣ್ಣನ ಕೊಲೆಗೆ ರಿವೇಂಜ್ ತೀರಿಸಿಕೊಂಡ ತಮ್ಮ: ಕೋರ್ಟ್ ಕಲಾಪ ಮುಗಿಸಿಕೊಂಡು ಬರುತ್ತಿದ್ದಾಗ ಮರ್ಡರ್!
ಗಂಗಾಧರ ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿದ ವೇಳೆ ಪೊಲೀಸರ ಜೊತೆಗೆ ಗ್ರಾಮಸ್ಥರು ವಾಗ್ವಾದ ನಡೆಸಿದ್ದು, ಸ್ಥಳಕ್ಕೆ ಎಸ್ಪಿ ಆಗಮಿಸಬೇಕೆಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ