
ರಾಯಚೂರು (ಫೆ.8): ಹೆತ್ತವರು ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದು ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಸಂಗೀತಾ(17) ಆತ್ಮಹತ್ಯೆಗೆ ಮಾಡಿಕೊಂಡ ಅಪ್ರಾಪ್ತ ಬಾಲಕಿ. ಕಾರು ಡ್ರೈವರ್ ಕೃಷ್ಣ ಎಂಬಾತನ ಪ್ರೇಮ ಪಾಶದಲ್ಲಿ ಬಿದ್ದಿದ್ದ ಬಾಲಕಿ. ಈ ಹಿಂದೆ 2 ಬಾರಿ ಕೃಷ್ಣನ ಜೊತೆಗೆ ಮನೆಬಿಟ್ಟು ಹೋಗಿದ್ದ ಬಾಲಕಿ. ಮನೆಯವರು ಬುದ್ಧಿವಾದ ಹೇಳಿ ಕರೆತಂದಿದ್ದರು. ಆದರೆ ಕೃಷ್ಣನ ಜೊತೆಗೆ ಹೋಗುವುದಾಗಿ ಹಠ ಮಾಡಿದ್ದ ಬಾಲಕಿ. ಆದರೆ ಮನೆಯವರು ಇದಕ್ಕೆ ವಿರೋಧಿಸಿದ್ದಾರೆ. ಇದರಿಂದ ಮನನೊಂದ ಯುವತಿ ಮನೆಯಲ್ಲಿದ್ದ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸದ್ಯ ಬಾಲಕಿ ಸಂಗೀತಾ ಮೃತದೇಹ ಮಾನ್ವಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಾಸ್ಟೆಲ್ನಲ್ಲಿ ಓದುತ್ತಲೇ ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ