
ಗದಗ(ಜ.17): ಗೂರ್ಖಾ ಮೇಲೆ ಕಳ್ಳರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ನರಗುಂದ ಪಟ್ಟಣದ ಮಾರುಕಟ್ಟೆಯಲ್ಲಿ ಇಂದು(ಭಾನುವಾರ) ನಡೆದಿದೆ. ನೇಪಾಳ ಮೂಲದ ನರ್ಸಿಂಗ್ ಹರೀಶಸಿಂಗ್ ಸೌಧ (60) ಎಂಬುವರೇ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ.
ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ನರ್ಸಿಂಗ್ ಹರೀಶಸಿಂಗ್ ಸೌಧ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಕಳ್ಳತನ ಮಾಡುವಾಗ ತಡೆಯಲು ಬಂದ ಗೂರ್ಖಾನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತ ನಡೆಸಿ ಇಬ್ಬರಿಗೆ ಚೂರಿ ಇರಿದ ಅಪರಿಚಿತರು
ನರ್ಸಿಂಗ್ ಹರೀಶಸಿಂಗ್ ಸೌಧ ಅವರು ನರಗುಂದ ಪಟ್ಟಣದಲ್ಲಿ ಕಳೆದ 4೦ ವರ್ಷಗಳಿಂದ ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದಾರೆ. ದುಷ್ಕರ್ಮಿಗಳ ಹಲ್ಲೆಗೆ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ನರ್ಸಿಂಗ್ ಹರೀಶಸಿಂಗ್ ಸೌಧ ಅವರನ್ನ ನರಗುಂದ ತಾಲೂಕಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಡಲಾಗಿದೆ. ನರಗುಂದ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ