ಅಪಘಾತ ನಡೆಸಿ ಇಬ್ಬರಿಗೆ ಚೂರಿ ಇರಿದ ಅಪರಿಚಿತರು

Kannadaprabha News   | Asianet News
Published : Dec 27, 2020, 03:39 PM IST
ಅಪಘಾತ ನಡೆಸಿ ಇಬ್ಬರಿಗೆ ಚೂರಿ ಇರಿದ ಅಪರಿಚಿತರು

ಸಾರಾಂಶ

ಇಬ್ಬರಿಗೂ ಚೂರಿಯಿಂದ ಬೆನ್ನು ಹಾಗೂ ಸೊಂಟದ ಭಾಗಕ್ಕೆ ಇರಿದ ಸ್ಥಳದಿಂದ ಪರಾರಿಯಾದ ಆಗಂತುಕರು| ಇಬ್ಬರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು| ಈ ಸಂಬಂಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು| 

ಉಳ್ಳಾಲ(ಡಿ.27): ಬೈಕ್‌ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಇನ್ನೊಂದು ಬೈಕ್‌ನಲ್ಲಿ ಬಂದ ತಂಡವೊಂದು ಅಪಘಾತ ನಡೆಸಿ ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಮತ್ತು ಪಂಡಿತ್‌ ಹೌಸ್‌ ನಿವಾಸಿ ಪವನ್‌ (27) ಇರಿತಕ್ಕೊಳಗಾದವರು. ಚರ್ಚೊಂದರಲ್ಲಿ ಕ್ಯಾಟರಿಂಗ್‌ನಲ್ಲಿ ಕೆಲಸಕ್ಕಿದ್ದ ಸಹೋದರನನ್ನು ಕರೆ ತರಲು ತೆರಳುವಾಗ ಘಟನೆ ನಡೆದಿದೆ.

ಕುಡಿಬೇಡ ಎಂದಿದ್ದಕ್ಕೆ ಪತ್ನಿ ಎದುರೇ ಕೆರೆಗೆ ಹಾರಿ ಪ್ರಾಣಬಿಟ್ಟ ಕುಡುಕ ಗಂಡ

ಹಿಂಬದಿಯಿಂದ ಬಂದ ಅಪರಿಚಿತ ಬೈಕ್‌ ಇವರಿದ್ದ ಬೈಕ್‌ಗೆ ಗುದ್ದಿದೆ. ಈ ವೇಳೆ ಇಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಆ ಬಳಿಕ ಇಬ್ಬರಿಗೂ ಚೂರಿಯಿಂದ ಬೆನ್ನು ಹಾಗೂ ಸೊಂಟದ ಭಾಗಕ್ಕೆ ಇರಿದ ಆಗಂತುಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಓರ್ವನಿಗೆ ಎರಡು ಕಡೆಯಲ್ಲಿ ಗಾಯಗಳಾದರೆ, ಇನ್ನೋರ್ವನಿಗೆ ಒಂದು ಗಾಯವಾಗಿದೆ. ಇಬ್ಬರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?