ಬೆಂಗಳೂರು: ಹಳೆ ದ್ವೇಷ, ನಡು ರಸ್ತೆಯಲ್ಲೇ ಕಾರ್ ಅಡ್ಡಗಟ್ಟಿ ಯುವಕನ ಮೇಲೆ ಹಲ್ಲೆ

Published : May 17, 2023, 01:21 PM IST
ಬೆಂಗಳೂರು: ಹಳೆ ದ್ವೇಷ, ನಡು ರಸ್ತೆಯಲ್ಲೇ ಕಾರ್ ಅಡ್ಡಗಟ್ಟಿ ಯುವಕನ ಮೇಲೆ ಹಲ್ಲೆ

ಸಾರಾಂಶ

ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು. 

ಬೆಂಗಳೂರು(ಮೇ.17):  ಹಳೆ ದ್ವೇಷದ ಹಿನ್ನಲೆಯಲ್ಲಿ ಯುವಕನೊಬ್ಬನಿಗೆ ನಡು ರಸ್ತೆಯಲ್ಲೇ ಕಾರ್ ಅಡ್ಡಗಟ್ಟಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಖಿಲ್@ ಹೇಮಾದ್ರಿ ಎಂಬಾತನ ಮೇಲೆ ಹಲ್ಲೆ ರೋನಿತ್ ಹಾಗೂ ದುರ್ಗಾ ಸೇರಿದಂತೆ ಐದು ಜನರಿಂದ ಹಲ್ಲೆ ಮಾಡಿದೆ. 

ಕಾರನ್ನ ಫಾಲೋ ಮಾಡಿಕೊಂಡು ಬಂದು ನಡು ರಸ್ತೆಯಲ್ಲೇ ಅಖಿಲ್ ಮೇಲೆ ಹಲ್ಲೆ ಮಾಡಿದ್ದಾರೆ. ಕಾರು ಬಿಸಿನೆಸ್ ವಿಚಾರದಲ್ಲಿ ಆರೋಪಿ ರೋನಿತ್ ವಂಚನೆ ಮಾಡಿದ್ದನಂತೆ. ಈ ಹಿನ್ನಲೆಯಲ್ಲಿ ಅಖಿಲ್ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು. ದೂರಿನ ಸಂಬಂಧ ರೋನಿತ್ ಬಂಧಿತನಾಗಿದ್ದ. ನಂತರ ಜಾಮೀನು ಪಡೆದು ಹೊರ ಬಂದಿದ್ದನು. 

Bengaluru: ಪತ್ನಿ ಶೋಕಿಗೆ ಹಣ ಹೊಂದಿಸಲಾಗದೇ, ಮಕ್ಕಳ ಸಮೇತ ತಂದೆಯೂ ಆತ್ಮಹತ್ಯೆ!

ಜಾಮೀನಿನ ಮೇಲೆ ಹೊರಬಂದು ಪದೇ ಪದೇ ಅಖಿಳ್‌ಗೆ ಬೆದರಿಕೆ ಹಾಕ್ತಿದ್ದನಂತೆ. ಇದೇ ದ್ವೇಷದಿಂದ ರೋನಿತ್ ಸಮಯಕ್ಕಾಗಿ ಕಾಯುತ್ತಿದ್ದನಂತೆ. ಕಚೇರಿ ಕೆಲಸ ಮುಗಿಸಿ ಮನೆಗೆ ಹೋಗುವ ವೇಳೆ ರೋನಿತ್ ಟೀಂ ಫಾಲೋ ಮಾಡಿಕೊಂಡು ಬಂದಿತ್ತು. ಎಲ್ ಆ್ಯಂಡ್ ಟಿ ಅಪಾರ್ಟ್ಮೆಂಟ್ ಬಳಿ ಬರುತ್ತಿದ್ದಂತೆ ರೋನಿತ್ ಟೀಂ ಅಡ್ಡ ಹಾಕಿಕಾರಿನಲ್ಲಿರುವಾಗಲೇ ಅಖಿಲ್ ಮೇಲೆ ಹಲ್ಲೆ ನಡೆಸಿ ಕಾರಿನ ಗ್ಲಾಸ್ ಒಡೆದು ಹಾಕಿದ್ದರು. 

ಹಲ್ಲೆ ನಡೆಸಿ ರೋನಿತ್ ಟೀಂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆ ಮಾಡಿದ ಪೈಕಿ ದುರ್ಗಾ ಲೇಡಿ ಡಾನ್ ಅಂತೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ