ಬೆಂಗಳೂರು; ರಾಮಮಂದಿರ ನಿಧಿ ಸಂಗ್ರಹ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ದಾಳಿ

Published : Jan 29, 2021, 09:49 PM ISTUpdated : Jan 29, 2021, 09:50 PM IST
ಬೆಂಗಳೂರು; ರಾಮಮಂದಿರ ನಿಧಿ ಸಂಗ್ರಹ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ದಾಳಿ

ಸಾರಾಂಶ

ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ/ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳಿಂದ ದಾಳಿ/ ಬಿಸ್ಮಿಲ್ಲಾ  ನಗರದಲ್ಲಿ ಘಟನೆ/ ಪರಿಸ್ಥಿತಿ ನಿಯಂತ್ರಣಕ್ಕೆ ತಂದ ಪೊಲೀಸರು

ಬೆಂಗಳೂರು (ಜ.  29)  ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುತ್ತಿದ್ದ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವೊಂದು ದಾಳಿ ಮಾಡಿದೆ. ನಗರ ಬಿಸ್ಮಿಲ್ಲಾ ನಗರದಲ್ಲಿ ಘಟನೆ ಸಂಭವಿಸಿದ್ದು ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ನಿಧಿ ಸಮರ್ಪಣೆ ವೇಳೆ ಹಲ್ಲೆಗೆ ಮುಂದಾದ ಗುಂಪೊಂದು ಪ್ರಚಾರೆದ ರಥಕ್ಕೂ ಹಾನಿ ಮಾಡಿದೆ.  ಶೇಷಾಚಲ, ಯಶವಂತ್, ಸುರೇಶ್ ಗಾಯಗೊಂಡಿದ್ದಾರೆ.

ರಾಮಮಂದಿರಕ್ಕೆ ಹುಬ್ಬಳ್ಳಿ ಉದ್ಯಮಿಯಿಂದ ಕೋಟಿ ದೇಣಿಗೆ

ನಿಮಗೆ ಇಲ್ಲಿಗೆ ಬರಲು ಅವಕಾಶ ಕೊಟ್ಟವರು ಯಾರು? ಇಲ್ಲಿಂದ  ಜಾಗ ಖಾಲಿ ಮಾಡಿ ಎಂದು ಹೇಳುತ್ತ ಬಂದ ಗುಂಪು ಕಲ್ಲಿನಿಂದ ದಾಳಿ ಮಾಡಿದೆ ಎಂದು ಕಾರ್ಯಕರ್ತರು ಹೇಳಿದ್ದಾರೆ.

ಸುದ್ದಗುಂಟೆ ಠಾಣೆಗೆ ಆಗಮಿಸಿದ ಡಿಸಿಪಿ ಶ್ರೀನಾಥ್ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.  ಇನ್ನೊಂದು ಕಡೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇಡೀ ದೇಶಾದ್ಯಂತ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯುತ್ತಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!