
ವಿಜಯಪುರ (ಜೂ.11): ಹಾಡಹಗಲೇ ಅದು ನ್ಯಾಯಾಲಯದ ಮುಂದೆಯೇ ವ್ಯಕ್ತಿಯ ಮೇಲೆ ರಾಡ್ನಿಂದ ಹಲ್ಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ನ್ಯಾಯಾಲಯದ ಮುಂದೆ ನಡೆದಿದೆ.
ವೈಯಕ್ತಿಕ ದ್ವೇಷ ಶಂಕೆ ನಾಲ್ವರು ವ್ಯಕ್ತಿಗಳು ಕೈಯಲ್ಲಿ ರಾಡ್ ಮಾರಕಾಸ್ತ್ರ ಹಿಡಿದು ಬಂದು ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಬಿಡಿಸಲು ಹೋದ ವ್ಯಕ್ತಿಗೂ ಹಲ್ಲೆ ಮಾಡಿರುವ ದುಷ್ಕರ್ಮಿಗಳು. ಸುತ್ತಮುತ್ತ ಪೊಲೀಸರು, ವಕೀಲರು ಇದ್ದರೂ ಯಾರದ್ದೂ ಭಯವಿಲ್ಲದೇ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಘಟನೆ ಕಂಡು ತಕ್ಷಣ ಮಧ್ಯೆ ಪ್ರವೇಶಿಸಿದ ವಕೀಲರು, ಸಾರ್ವಜನಿಕರು ಹಲ್ಲೆಗೊಳಗಾದ ವ್ಯಕ್ತಿಯನ್ನ ರಕ್ಷಿಸಿದ್ದಾರೆ
ರೇಣುಕಾಸ್ವಾಮಿ ಕೊಲೆಗೆ ನಟ ದರ್ಶನ್ ಹೊಣೆ, ಕಠಿಣ ಶಿಕ್ಷೆಯಾಗಲಿ: ಮಾಜಿ ಶಾಸಕ ಬಸವರಾಜನ್
ವಕೀಲರು ಬರುತ್ತಿದ್ದಂತೆ ಹಲ್ಲೆಕೋರರು ಕಾಲ್ಕಿತ್ತಿದ್ದಿದ್ದಾರೆ. ಈ ವೇಳೆ ನಾಲ್ವರನ್ನು ಹಿಡಿಯಲು ಸಾರ್ವಜನಿಕರು ಯತ್ನಿಸಿದ್ದಾರೆ. ಕೈಗೆ ಸಿಗದೇ ಪರಾರಿಯಾಗಿರುವ ದುಷ್ಕರ್ಮಿಗಳು. ಹಲ್ಲೆಗೊಳಗಾದ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ತಲೆಗೆ ಗಂಭೀರ ಗಾಯಗಳಾಗಿವೆ. ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ