
ಶಹಾಬಾದ (ಜೂ.5) : ನಿಧಿ ಆಸೆಗಾಗಿ ದುಷ್ಕರ್ಮಿಗಳು ಚಿತ್ತಾಪುರ ತಾಲೂಕಿನ ನಾಲವಾರ ವಲಯದ ಸೂಗೂರ (ಎನ) ಗ್ರಾಮದ ಹೊರ ವಲಯದ ಹೊಲದಲ್ಲಿರುವ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿದ್ದ ಶಿವಲಿಂಗವನ್ನು ಕಿತ್ತು, ಲಿಂಗದ ಅಡಿಯಲ್ಲಿ ಅಗೆದಿದ್ದಾರೆ.
ಗ್ರಾಮದಿಂದ ಸುಮಾರು 1ಕಿ.ಮೀ. ದೂರದಲ್ಲಿರುವ ಹೊಲದಲ್ಲಿ ಈ ದೇವಸ್ಥಾನವಿದ್ದು, ಶನಿವಾರ ಬೆಳಗೆ ಹೊಲಕ್ಕೆ ಹೋದ ರೈತರು, ಕುರಿಗಾಯಿಗಳು ಲಿಂಗ ಯಥಾಸ್ಥಳದಲ್ಲಿ ಇರುವದನ್ನು ನೋಡಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.
ಕಾರಹುಣ್ಣಿಮ ನಿಮಿತ್ತ ಭಾನುವಾರ ಬೆಳಗ್ಗೆ ಲಿಂಗಕ್ಕೆ ಪೂಜೆ ಮಾಡಲು ಹೋದ ಮುದಕಪ್ಪ ಪೂಜಾರಿಗೆ ಈ ಘಟನೆ ಕಂಡು ಬಂದಿದ್ದು, ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 2.5 ಅಡಿ ಎತ್ತರ ಇರುವ ಲಿಂಗವನ್ನು ಎತ್ತಿ ಪಕ್ಕಕ್ಕೆ ಇಟ್ಟು, ಅದರ ಅಡಿಯಲ್ಲಿದ್ದ ಬಂಡೆಯನ್ನು ತೆಗೆದು ನೆಲ ಅಗೆಯಲಾಗಿದೆ.
ನಿಧಿ ಆಸೆಗೆ ಪುರಾತನ ಕಾಲದ ಆಂಜನೇಯ ದೇವಾಲಯದ ಗರ್ಭಗುಡಿ ಅಗೆದ ದುಷ್ಕರ್ಮಿಗಳು!
ಈ ಹಿಂದೆ ಇದೇ ದೇವಸ್ಥಾನದ ಎದುರಿನ ಮಾನ ಕಂಭ, ದ್ವಾರದ ಬಳಿ ಅಗೆಯಲಾಗಿತ್ತು ಎನ್ನಲಾಗಿದೆ. 4-5 ವರ್ಷಗಳ ಹಿಂದೆ ಗ್ರಾಮದ ಶ್ರೀರಾಮಲಿಂಗೇಶ್ವರ ಹಾಗೂ ಈಶ್ವರ ದೇವಸ್ಥಾನದಲ್ಲಿಯೂ ಕಳ್ಳತನ ವಿಫಲ ಯತ್ನ ನಡೆಸಲಾಗಿತ್ತು. ಘಟನಾ ಸ್ಥಳಕ್ಕೆ ವಾಡಿ ಪೊಲೀಸ್ ಠಾಣೆ ಪೋಲಿಸರು ಭೇಟ್ಟಿನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ತನಿಖೆ ಕೈಗೊಂಡಿದ್ದಾರೆ.
ಉತ್ತರಕನ್ನಡ: ನಿಧಿ ಆಸೆಗೆ ಬಿದ್ದು ಬಾವಿ ತೋಡಿದ ಖದೀಮರು..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ