
ಶಿವಮೊಗ್ಗ(ಜು.23): ಎರಡು ದ್ವಿಚಕ್ರ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಿನ್ನೆ(ಗುರುವಾರ) ತಡರಾತ್ರಿ ನಗರದ ಗಾಂಧಿ ಬಜಾರ್ನ ಹಾರ್ನಳ್ಳಿ ಪುಕ್ರಾಜ್ ಜ್ಯವೆಲರ್ಸ್ ಮುಂಭಾಗ ನಡೆದಿದೆ.
ಜ್ಯುವೆಲ್ಲರಿ ಮಾಲೀಕ ಪಿ.ದಿಲೀಪ್ ಕುಮಾರ್ ಅವರಿಗೆ ಸೇರಿದ ಆಕ್ಟಿವ್ ಹೊಂಡ ಮತ್ತು ವೇಗೋ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ರಾತ್ರಿ 2.30ರ ಸುಮಾರಿಗೆ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ.
ಯೋಗನರಸಿಂಹಸ್ವಾಮಿ ಬೆಟ್ಟದ ರಾಜಗೋಪುರ ಬಾಗಿಲಿಗೆ ಬೆಂಕಿ
ಪಿ.ದಿಲೀಪ್ ಕುಮಾರ್ ಅವರ ಮಳಿಗೆಯ ಬೋರ್ಡ್ ಕೂಡ ಸುಟ್ಟು ಕರಲಾಗಿದ್ದು, ಸಾರ್ವಜನಿಕರು ಗಮನಿಸಿ ಬೆಂಕಿ ನಂದಿಸಿದ ಕಾರಣ ಹೆಚ್ಚಿನ ಅಪಾಯ ತಪ್ಪಿದಂತಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ