
ಹಾವೇರಿ(ಮೇ.05): ಜಿಲ್ಲಾಧಿಕಾರಿಗಳ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಿರುವ ಖದೀಮರು ಹಲವರಿಗೆ ಮೆಸೇಜ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ನಡೆದಿದೆ.
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರ ಫೇಸ್ಬುಕ್ ಖಾತೆಯ ಮೆಸೆಂಜರ್ ಮೂಲಕ ಮಂಗಳವಾರ ಹಲವರಿಗೆ ಸಂದೇಶ ಬಂದಿದೆ. ಹಾಯ್ ಎಂದು ಪರಿಚಯಿಸಿಕೊಂಡು ತುರ್ತಾಗಿ ಹಣ ನೀಡುವಂತೆ ಮೆಸೇಜ್ ಬಂದಿದೆ. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದಾರೆ. ಪಕ್ಕಾ ಸ್ನೇಹಿತರು ಹಣ ಕೇಳಿದರೆ ನಿಜ ಎಂದುಕೊಳ್ಳುತ್ತಿದ್ದರೇನೋ. ಆದರೆ, ಇಲ್ಲಿ ಜಿಲ್ಲಾಧಿಕಾರಿಗಳೇ ಹಣ ಕೇಳಿರುವುದರಿಂದ ಎಲ್ಲರಿಗೂ ಅನುಮಾನ ಬಂದಿದೆ. ನಿಮ್ಮ ಅಕೌಂಟ್ನಲ್ಲಿ ಎಷ್ಟು ಹಣವಿದೆ, 8 ಸಾವಿರ ಕೊಡಿ ಸಂಜೆ ವಾಪಸ್ ಕೊಡುತ್ತೇನೆ ಎಂದು ಇಂಗ್ಲಿಷ್ನಲ್ಲಿ ಮೆಸೇಜ್ ಬಂದಿದೆ.
ಹೆಂಡತಿ ತಂಗಿಯೊಂದಿಗೆ ಕುಚ್ ಕುಚ್...ಗರ್ಭಿಣಿ ಪತ್ನಿ ಹತ್ಯೆ ಮಾಡಿದ!
ಈ ರೀತಿ ಹಣ ಕೇಳಿ ಮೆಸೇಜ್ ಬರುತ್ತಿರುವುದನ್ನು ನೋಡಿ ಎಲ್ಲರಿಗೂ ಇದು ಫೇಕ್ ಎನ್ನುವುದು ಅರಿವಾಗಿದೆ. ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ತಮ್ಮ ಖಾತೆ ಹ್ಯಾಕ್ ಆಗಿದ್ದು, ಹಣಕ್ಕೆ ಬೇಡಿಕೆ ಇಟ್ಟು ಬರುವ ಮೆಸೇಜ್ಗೆ ಯಾರೂ ಪ್ರತಿಕ್ರಿಯಿಸಬಾರದು ಎಂದು ಕೋರಿಕೊಂಡರು. ಅಲ್ಲದೇ ಈ ಕುರಿತು ಜಿಲ್ಲಾಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ