ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ, ನಗದು, ಚಿನ್ನಾಭರಣ ದೋಚಿ ಪರಾರಿ.!

Published : Jun 22, 2024, 08:01 AM IST
ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ,  ನಗದು, ಚಿನ್ನಾಭರಣ ದೋಚಿ ಪರಾರಿ.!

ಸಾರಾಂಶ

ಪದ್ಮನಾಭ ಕೊಟ್ಯಾನ್ ಸಿವಿಲ್ ಕಾಂಟ್ರಾಕ್ಟ್ ಆಗಿದ್ದಾರೆ. 8 ದುಷ್ಕರ್ಮಿಗಳ ತಂಡ ಮಾಸ್ಕ್‌ ಇನ್ನೊವಾ ಕಾರಿನಲ್ಲಿ ಬಂದಿದ್ದರು. ಮನೆಗೆ‌ ನುಗ್ಗಿ ಮನೆ ಮಂದಿಗೆ ಚೂರಿ ತೋರಿಸಿ ಬೆದರಿಸಿ ಮನೆಯಲ್ಲಿದ್ದ ಉದ್ಯಮಿ ಪದ್ಮನಾಭ ಅವರ ಭುಜಕ್ಕೆ ಚೂರಿಯಿಂದ ಇರಿದು ದರೋಡೆ ಮಾಡಿ ಪರಾರಿಯಾದ ದುಷ್ಕರ್ಮಿಗಳು.   

ಮಂಗಳೂರು(ಜೂ.22):  ದುಷ್ಕರ್ಮಿಗಳು ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ ಮಾಡಿದ ಘಟನೆ ಮಂಗಳೂರು ಹೊರವಲಯದ ಪೆರ್ಮಂಕಿ ಎಂಬಲ್ಲಿ ನಡೆದ ನಡೆದಿದೆ. ಉದ್ಯಮಿ ಪದ್ಮನಾಭ ಕೊಟ್ಯಾನ್ ಮನೆಯಲ್ಲಿ ದರೋಡೆ ನಡೆದಿದೆ. 

ಪದ್ಮನಾಭ ಕೊಟ್ಯಾನ್ ಸಿವಿಲ್ ಕಾಂಟ್ರಾಕ್ಟ್ ಆಗಿದ್ದಾರೆ. 8 ದುಷ್ಕರ್ಮಿಗಳ ತಂಡ ಮಾಸ್ಕ್‌ ಇನ್ನೊವಾ ಕಾರಿನಲ್ಲಿ ಬಂದಿದ್ದರು. ಮನೆಗೆ‌ ನುಗ್ಗಿ ಮನೆ ಮಂದಿಗೆ ಚೂರಿ ತೋರಿಸಿ ಬೆದರಿಸಿ ಮನೆಯಲ್ಲಿದ್ದ ಉದ್ಯಮಿ ಪದ್ಮನಾಭ ಅವರ ಭುಜಕ್ಕೆ ಚೂರಿಯಿಂದ ಇರಿದಿದ್ದಾರೆ.  ಪದ್ಮನಾಭ ಅವರ ಪತ್ನಿಯನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ನಗದು ಸೇರಿದಂತೆ ಚಿನ್ನಾಭರಣ, ದೋಚಿ ಪರಾರಿಯಾಗಿದ್ದಾರೆ. 

ಹೊಸಕೋಟೆ: ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಕ್ಕೆ ಪ್ರಶ್ನೆ ಮಾಡಿದ ವ್ಯಕ್ತಿಯನ್ನೇ ಕೊಂದ ದುಷ್ಕರ್ಮಿಗಳು..!

ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳೂ ಕೂಡ ತೆರಳಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಪದ್ಮನಾಭ ಕೊಟ್ಯಾನ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ದರೋಡೆಕೋರರು ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು ತಿಳಿದು ಬಂದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Breaking: ಬಿಕ್ಲು ಶಿವ ಕೊಲೆ ಕೇಸ್ ಬೈರತಿಗೆ ರಿಲೀಫ್, ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು
ಮೈಸೂರು: ಬಲೂನ್ ಹೀಲಿಯಂ ಸಿಲಿಂಡರ್ ಸ್ಫೋಟ; ಮೃತ ಸಲೀಂ ವಿರುದ್ಧ ಎಫ್‌ಐಆರ್ ದಾಖಲು