ಬೆಂಗಳೂರು: ಎಟಿಎಂ ಒಡೆಯಲು ಈ ಕಳ್ಳರು ಮಾಡಿದ್ದ ಮಾಸ್ಟರ್ ಪ್ಲಾನ್!

Published : Aug 10, 2020, 05:03 PM ISTUpdated : Aug 10, 2020, 05:08 PM IST
ಬೆಂಗಳೂರು: ಎಟಿಎಂ ಒಡೆಯಲು ಈ ಕಳ್ಳರು ಮಾಡಿದ್ದ ಮಾಸ್ಟರ್ ಪ್ಲಾನ್!

ಸಾರಾಂಶ

ಬೆಂಗಳೂರಲ್ಲಿ ಕಳ್ಳರ ಕೈಚಳಕ/ ಎಟಿಎಂ ಒಡೆದು ಹಣ ದೋಚಿದರು/ ಜಾಲಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂ ಕಳ್ಳತನ/ ಎಟಿಎಂ ಒಳಗಿದ್ದ 27 ಲಕ್ಷ ರೂ.  ಕಳ್ಳರ ಪಾಲು

ಬೆಂಗಳೂರು(ಆ.10) ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಕಳ್ಳರು ಎಟಿಎಂ  ದೋಚಿದ್ದಾರೆ. ಜಾಲಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂ ಕಳ್ಳತನ ಮಾಡಲಾಗಿದೆ.

ಗ್ಯಾಸ್ ಕಟರ್ ಬಳಸಿ ಎಟಿಎಂ ಒಡೆದು ಹಣ ಕದ್ದು ಪರಾರಿಯಾಗಿದ್ದಾರೆ. ಎಟಿಎಂ ಒಳಗಿದ್ದ 27 ಲಕ್ಷ ರೂ.  ಕಳ್ಳತನವಾಗಿದೆ. ಸೋಮವಾರ ಬೆಳಿಗ್ಗೆ ಹತ್ತಿರದ ಮನೆ ಮಾಲೀಕರು ಗಮನಿಸಿದಾಗ ವಿಚಾರ ಬೆಳಕಿಗೆ ಬಂದಿದೆ. 

ಮೂರು ಕೋಟಿ ಆಸ್ತಿಗಾಗಿ ಹೆತ್ತಪ್ಪನ ಬೀದಿಗೆ ಬಿಟ್ಟ ಮಕ್ಕಳು

ಈ  ಬಗ್ಗೆ  ಉತ್ತರ ವಿಭಾಗದ ಡಿಸಿಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ. ಕೆನರಾ ಎಟಿಎಂನಲ್ಲಿ ನೆನ್ನೆ ರಾತ್ರಿ ಕಳ್ಳತನ ನಡೆದಿದೆ. ಎಟಿಎಂಗೆ ಯಾವುದೇ ಸೆಕ್ಯೂರಿಟಿ ಗಾರ್ಡ್ ಇರಲಿಲ್ಲ ಹೊರಗೆ ಮತ್ತು ಒಳಗೆ ಸಿಸಿಟಿವಿಗಳೂ ಇರಲಿಲ್ಲ. ಶನಿವಾರ ಎಟಿಎಂ ಆಫ್ ಲೈನ್ ಆಗಿತ್ತು ಆ ವಿಚಾರವನ್ನು ಪೊಲೀಸರಿಗೆ ಬ್ಯಾಂಕ್ ಸಿಬ್ಬಂದಿ ತಿಳಿಸಿರಲಿಲ್ಲ.  ಪಕ್ಕಾ ಪ್ಲಾನ್ ಮಾಡಿ ಕಳ್ಳರು ಹಣ ದೋಚಿದ್ದು ಮಹತ್ವದ ಸುಳಿವು ಲಭ್ಯವಾಗಿದ್ದು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು