ರಾಯಚೂರು: ಮಸೀದಿ ಒಳಗೆ ಬಿಯರ್ ಬಾಟಲ್‌ ಎಸೆದ ಕಿಡಿಗೇಡಿಗಳು, ಸಿರವಾರದಲ್ಲಿ ಪೊಲೀಸ್ ಬಂದೋಬಸ್ತ್..!

By Girish GoudarFirst Published Jul 31, 2024, 9:01 AM IST
Highlights

ಮಸೀದಿ ಸುತ್ತಮುತ್ತ ಹಾಗೂ ಸಿರವಾರ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.  ಘಟನೆ ಬಳಿಕ ರಾಯಚೂರು ಎಸ್‌ಪಿ ಪುಟ್ಟಮಾದಯ್ಯ ಅವರು ಸಿರವಾರ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ರಾಯಚೂರು(ಜು.31):  ಮಸೀದಿ ಒಳಗೆ ಕಿಡಿಗೇಡಿಗಳು ಬಿಯರ್ ಬಾಟಲ್‌ಗಳನ್ನ ಎಸೆದ ಘಟನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ನಡೆದಿದೆ. ಮಸೀದಿ ಒಳಗೆ ಕಿಡಿಗೇಡಿಗಳು ಬಿಯರ್ ಬಾಟಲ್‌ಗಳನ್ನ ಎಸೆದಿದ್ದರಿಂದ ಮುಸ್ಲಿಂ ಮುಖಂಡರು ರಾತ್ರೋರಾತ್ರಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. 

ಕೂಡಲೇ ‌ಅಲರ್ಟ್ ಆದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನ ವಶಕ್ಕೆ ಪಡೆದಿದ್ದಾರೆ.  ಈ ಸಂಬಂಭ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Latest Videos

ಕೆಆರ್‌ಟಿಸಿಗೆ ಹೈಕೋರ್ಟ್ ದಂಡ, ಬಸ್‌ನಿಂದ ಬಿದ್ದು ಸಾವನ್ನಪ್ಪಿದ ಮಹಿಳೆಗೆ 26 ಲಕ್ಷ ರು. ಪರಿಹಾರ

ಮಸೀದಿ ಸುತ್ತಮುತ್ತ ಹಾಗೂ ಸಿರವಾರ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.  ಘಟನೆ ಬಳಿಕ ರಾಯಚೂರು ಎಸ್‌ಪಿ ಪುಟ್ಟಮಾದಯ್ಯ ಅವರು ಸಿರವಾರ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

click me!