
ತುಮಕೂರು (ಆ.4): ನಿಧಿಗಾದಿ ಮಧ್ಯೆರಾತ್ರಿ ದೇವಸ್ಥಾನದಲ್ಲಿ ಕಿಡಿಗೇಡಿಗಳು ಬಂಡೆ ಕೊರೆದು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ವಡ್ಡರಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಬನವಾಸಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.
ದೇವಸ್ಥಾನದಲ್ಲಿ ನಿಧಿ ಇದೆಯೆಂದು ಮಧ್ಯರಾತ್ರಿ ನುಗ್ಗಿರುವ ಕಿಡಿಗೇಡಿಗಳು. ದೇವಸ್ಥಾನದ ಮೂರು ಕಡೆ ಬಂಡೆ ಕೊರೆದಿದ್ದಾರೆ. ಬಂಡೆ ಕೊರೆದ ಸ್ಥಳದಲ್ಲಿ ಅರಿಶಿನ ಕುಂಕುಮ, ತೆಂಗಿನಕಾಯಿ ಹಾಗೂ ವಸ್ತುವನ್ನಿಟ್ಟು ಪೂಜೆ ಮಾಡಿರುವ ಕಿಡಿಗೇಡಿಗಳು. ಬಂಡೆ ಕೊರೆದ ಬಳಿಕವೂ ನಿಧಿ ಸಿಗದ್ದಕ್ಕೆ ಅರ್ಧಕ್ಕೆ ಬಿಟ್ಟು ಪರಾರಿಯಾಗಿರುವ ಕಿಡಿಗೇಡಿಗಳು
ಪೆನ್ನು ಕದ್ದಿದ್ದಕ್ಕೆ ಬಾಲಕನಿಗೆ ಚಿತ್ರಹಿಂಸೆ ಕೊಟ್ಟ ಪ್ರಕರಣ; ರಾಮಕೃಷ್ಣಮಠದ ಗುರೂಜಿ ಬಂಧನ
ಬೆಳಗ್ಗೆ ಎಂದಿನಂತೆ ದೇವಸ್ಥಾನದ ಅರ್ಚಕ ಪೂಜೆ ಮಾಡಲು ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ದೇವಸ್ಥಾನದಲ್ಲಿ ಜಮಾಯಿಸಿದ ಗ್ರಾಮಸ್ಥರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ನಿಧಿ ಆಸೆಗೆ ದೇವಸ್ಥಾನದಲ್ಲಿ ಮೂರ್ತಿ ಒಡೆಯುವ, ಬಂಡೆ ಕೊರೆಯುವ ಕಿಡಿಗೇಡಿಗಳು ಹೆಚ್ಚಾಗಿದ್ದು ದೇವಸ್ಥಾನಕ್ಕೆ ಭದ್ರತೆ ಕೊಡುವಂತ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ