ನಿವೃತ್ತ ಸೇನಾಧಿಕಾರಿಗೆ ಮದುವೆ ಮಾಡಿಸುವುದಾಗಿ ವಂಚನೆ, ಹೋಂ ಸ್ಟೇಗೆ ಕರೆದೊಯ್ದು ಖದೀಮರು ಮಾಡಿದ್ದೇನು?

Published : Dec 10, 2023, 01:45 PM IST
ನಿವೃತ್ತ ಸೇನಾಧಿಕಾರಿಗೆ ಮದುವೆ ಮಾಡಿಸುವುದಾಗಿ ವಂಚನೆ, ಹೋಂ ಸ್ಟೇಗೆ ಕರೆದೊಯ್ದು ಖದೀಮರು ಮಾಡಿದ್ದೇನು?

ಸಾರಾಂಶ

ನಿವೃತ್ತ ಸೇನಾಧಿಕಾರಿಗೆ ಮದುವೆ ಮಾಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದ್ದು, ವಂಚನೆ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಡಗು (ಡಿ.10): ನಿವೃತ್ತ ಸೇನಾಧಿಕಾರಿಗೆ ಮದುವೆ ಮಾಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದ್ದು, ವಂಚನೆ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಫೈಜಲ್, ಅಬ್ದುಲ್ ಬಷೀರ್, ಸಾದಿಕ್ ಬಂಧಿತ ಆರೋಪಿಗಳು. ಜಾನ್ ಮ್ಯಾಥ್ಯು ಮೋಸ ಹೋದ ನಿವೃತ್ತ ಸೇನಾಧಿಕಾರಿ. ಕೇರಳ ಮೂಲದವರಾದ ನಿವೃತ್ತ ಸೇನಾಧಿಕಾರಿ ಜಾನ್ ಮ್ಯಾಥ್ಯು ಅವಿವಾಹಿತರಾಗಿಯೇ ಉಳಿದಿದ್ದರು. ಆದರೆ ಜಾನ್ ಮ್ಯಾಥ್ಯುಗೆ ಪರಿಚಯವಾಗಿದ್ದ ಆರೋಪಿಗಳು. ಮದುವೆ ಮಾಡಿಕೊಳ್ಳುವಂತೆ ಪುಸಲಾಯಿಸಿದ್ದರು. ಮದುವೆ ಮಾಡಿಕೊಂಡರೆ ನಿವೃತ್ತ ಜೀವನ ಸುಖವಾಗಿರುತ್ತದೆ ಎಂದು ನಂಬಿಸಿದ್ದರು. 

ಪಾರ್ಟ್‌ ಟೈಂ ಜಾಬ್ ಹೆಸರಿನಲ್ಲಿ ಮಹಿಳೆಗೆ 1.47 ಲಕ್ಷ ರೂ. ಉಂಡೇನಾಮ !

ಖದೀಮರ ಮಾತುಗಳನ್ನು ನಂಬಿದ್ದ ನಿವೃತ್ತ ಸೇನಾಧಿಕಾರಿ ಮದುವೆಯಾಗಲು ಒಪ್ಪಿಕೊಂಡಿದ್ದರು. ಅದರಂತೆಯೇ ಹುಡುಗಿ ತೋರಿಸುವುದಾಗಿ ಅವಳೊಂದಿಗೆ ಮದುವೆ ಮಾಡಿಸುವುದಾಗಿ ಪಕ್ಕಾ ಪ್ಲಾನ್ ಮಾಡಿಕೊಂಡು ನಿವೃತ್ತಕ ಸೇನಾಧಿಕಾರಿಯನ್ನ ಮಡಿಕೇರಿ ಹೋಂ ಸ್ಟೇಗೆ ಕರೆದುಕೊಂಡು ಬಂದಿದ್ದ ಆರೋಪಿಗಳು. ಹೋಂ ಸ್ಟೇನಲ್ಲೇ ಗೊತ್ತುಪಡಿಸಿದ ಮಹಿಳೆಯೊಬ್ಬಳೊಂದಿಗೆ ವಿವಾಹ ಮಾಡಿಸಿದ್ದ ಖದೀಮರು. ಬಳಿಕ ವಿವಾಹದ ಫೋಟೊಗಳನ್ನು ಇಟ್ಟುಕೊಂಡು ನಿವೃತ್ತ ಸೇನಾಧಿಕಾರಿಗೆ ಬ್ಲಾಕ್ ಮಾಡಲು ಶುರು ಮಾಡಿದ್ದಾರೆ. 

ಅಯ್ಯಪ್ಪ ಮಾಲೆ ಧರಿಸಿ ವಂಚನೆ; ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು!

10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಖದೀಮರು. ಹಣ ನೀಡದಿದ್ದರೆ ಮದುವೆ ಫೋಟೋ ನಿಮ್ಮ ಕುಟುಂಬದವರಿಗೆ ಕಳುಹಿಸುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ. ಬ್ಲಾಕ್‌ಮೇಲ್ ಮಾಡಿ 8 ಲಕ್ಷ ನಗದು, 2.10 ಲಕ್ಷದ ಚೆಕ್ ಪಡೆದಿದ್ದ ಖದೀಮರು. ಬಳಿಕ ಅಲ್ಲಿಂದ ಕಾಲ್ಕಿತ್ತು ತಲೆಮರೆಸಿಕೊಂಡಿದ್ದರು. ಈ ಬಗ್ಗೆ ನಿವೃತ್ತ ಸೇನಾಧಿಕಾರಿ ಮಡಿಕೇರಿ ಪೊಲೀಸ್ ಠಾಣೆ ಬಗ್ಗೆ ದೂರು ನೀಡಿದ್ದರು. ಪ್ರಕರಣದ ಬೆನ್ನುಹತ್ತಿದ ಪೊಲೀಸರು ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಇನ್ನೊಬ್ಬ ಆರೋಪಿ ಅಮೀರ್ ತಲೆಮರೆಸಿಕೊಂಡಿದ್ದಾನೆ. ಬಂಧಿತರಿಂದ 1.05 ಲಕ್ಷ ರೂಪಾಯಿ ನಗದು 2.10 ಲಕ್ಷ ರೂಪಾಯಿಯ ಚೆಕ್ ವಶಕ್ಕೆ ಪಡೆದ ಪೊಲೀಸರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!