ನಿಧಿಗಾಗಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ದುಷ್ಕರ್ಮಿಗಳು!

Published : Jun 23, 2023, 03:42 PM IST
ನಿಧಿಗಾಗಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ದುಷ್ಕರ್ಮಿಗಳು!

ಸಾರಾಂಶ

ನಿಧಿಗಾಗಿ ದುಷ್ಕರ್ಮಿಗಳು ನಿರ್ಜನ ಪ್ರದೇಶದಲ್ಲಿ 15 ಅಡಿ ಅಗಲ ಹಾಗೂ ಸುಮಾರು 25 ಅಡಿಯಷ್ಟು ಆಳದ ಬೃಹತ್ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು (ಜೂ.23)  : ನಿಧಿಗಾಗಿ ದುಷ್ಕರ್ಮಿಗಳು ನಿರ್ಜನ ಪ್ರದೇಶದಲ್ಲಿ 15 ಅಡಿ ಅಗಲ ಹಾಗೂ ಸುಮಾರು 25 ಅಡಿಯಷ್ಟು ಆಳದ ಬೃಹತ್ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಡೆದಿದೆ.

ಉಡುಪಿ ನೋಂದಣಿ ಹೊಂದಿರುವ ಎರಡು ಕಾರುಗಳಲ್ಲಿ ಬಂದಿದ್ದ 15ಕ್ಕೂ ಹೆಚ್ಚು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ನಿಧಿಗಾಗಿ ಶೋಧ ನಡೆಸಿದ ಜಾಗದಲ್ಲಿ ಅರಿಶಿನ-ಕುಂಕುಮ, ಬಾಳೆಹಣ್ಣು, ತೆಂಗಿನಕಾಯಿ, ಕುಂಬಳಕಾಯಿ, ಊದುಬತ್ತಿ, ಕರ್ಪೂರ, ಮೂರು ತರದ ದಾರ, ಕೋಳಿ ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿವೆ. 

ಚಿತ್ತಾಪುರ: ನಿಧಿ ಆಸೆಗೆ ಶಿವಲಿಂಗ ಕಿತ್ತು ಅಗೆದಿರುವ ದುಷ್ಕರ್ಮಿಗಳು!

ಅಮಾವಾಸ್ಯೆ ದಿನದಂದು ನಿಧಿಗಾಗಿ ಶೋಧದ ಶಂಕೆ : 

ಇದೇ ತಿಂಗಳು 18ರಂದು ಅಮಾವಾಸ್ಯೆ ಇದ್ದ ಹಿನ್ನೆಲೆಯಲ್ಲಿ ಅಂದು ನಿಧಿಗಾಗಿ ಶೋಧ ಕಾರ್ಯ ನಡೆದಿರುವ ಸಾಧ್ಯತೆಗಳು ಹೆಚ್ಚಾಗಿವೆ. ಕರಾವಳಿಯಿಂದ ಆಗಮಿಸಿದ ಕೆಲ ದುಷ್ಕರ್ಮಿಗಳು ನಿಧಿಗಾಗಿ ಶೋಧ ಕಾರ್ಯ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಳೆದೊಂದು ವಾರದಿಂದ ರಸ್ತೆ ಬದಿ ಎರಡು ಮೂರು ಗಾಡಿಗಳು ನಿಲ್ಲುತ್ತಿದ್ದವು. ಸ್ಥಳೀಯರಿಗೆ ಅನುಮಾನ ಕೂಡ ಮೂಡಿತ್ತು. 

ಕಳೆದ ರಾತ್ರಿ ತೋಟಕ್ಕೆ ನೀರಾಯಿಸಲು ಹೋಗುವಾಗಲೂ ರಸ್ತೆ ಬದಿ ಎರಡು ಕಾರುಗಳು ನಿಂತಿದ್ದವು. ತೋಟಕ್ಕೆ ನೀರಿನ ಮೋಟಾರ್ ಆನ್ ಮಾಡಿ ಬರುವಾಗ ತೋಟದ ಮಧ್ಯೆ ಗಲಾಟೆ ಹಾಗೂ ಬೆಳಕು ಕಾಣುತ್ತಿತ್ತು. ಇದನ್ನ ಗಮನಿಸಿದ ಸ್ಥಳೀಯರು ಊರಿಗೆ ಬಂದು ನಾಲ್ಕೈದು ಜನ ಸ್ಥಳಕ್ಕೆ ಹೋಗಿ ಟಾರ್ಚ್ ಆನ್ ಮಾಡಿ ಯಾರೆಂದು ಕೇಳಿದಾಗ ಎಲ್ಲರೂ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳದಲ್ಲಿದ್ದ ಗುಂಡಿಯನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ.

ಕೊಪ್ಪಳದಲ್ಲಿ ಬಾಣಂತಿ ಹತ್ಯೆ, ಅಮವಾಸ್ಯೆ ಹಿನ್ನೆಲೆ ನಿಧಿಗಾಗಿ ನಡೆಯಿತಾ ಭೀಕರ ಕೊಲೆ!?

ಪೊಲೀಸರಿಗೆ ದೂರು ನೀಡಿದ ಸ್ಥಳೀಯರು

ವಾಮಾಚಾರ ನಡೆದಿರುವ ಶಂಕೆಯನ್ನು ಸ್ಥಳೀಯರು  ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿದ್ದ ವಾಮಾಚಾರದ ವಸ್ತುಗಳು, ಗುಂಡಿಯನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ಭಯಭೀತರಾಗಿರುವ ಸ್ಥಳೀಯರು ಆಲ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೆಸರಿಕೆ ಗ್ರಾಮಕ್ಕೆ ಭೇಟಿ ನೀಡಿ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್