ಉಡುಪಿ: ಚೂರಿಯಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನ ಕೊಂದ ದುಷ್ಕರ್ಮಿಗಳು..!

Published : Nov 12, 2023, 11:30 AM ISTUpdated : Nov 12, 2023, 12:17 PM IST
ಉಡುಪಿ: ಚೂರಿಯಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನ ಕೊಂದ ದುಷ್ಕರ್ಮಿಗಳು..!

ಸಾರಾಂಶ

ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆಯಿಂದಷ್ಟೇ ಕೊಲೆಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ. 

ಉಡುಪಿ(ನ.11): ಒಂದೇ ಕುಟುಂಬದ ನಾಲ್ವರನ್ನ ದುಷ್ಕರ್ಮಿ ಚೂರಿಯಿಂದ ಚುಚ್ಚಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆ ಮಲ್ಪೆ ಠಾಣಾ ವ್ಯಾಪ್ತಿಯ ತೃಪ್ತಿನಗರದಲ್ಲಿ ಇಂದು(ಭಾನುವಾರ) ನಡೆದಿದೆ.   ಹಸೀನಾ(46), ಅಫ್ನಾನ್(23), ಅಯ್ನಾಝ್(21) ಹಾಗೂ ಆಸಿಂ(12) ಎಂಬುವರನ್ನ ದುಷ್ಕರ್ಮಿ ಚೂರಿಯಿಂದ ಚುಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ. ತಾಯಿ ಮತ್ತು ಮೂವರು ಮಕ್ಕಳನ್ನ ಕೊಲೆ ಮಾಡಲಾಗಿದೆ. 

ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ ಹಾಗೂ ಮಹಿಳೆಯ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫಫಾನ್, ಐನಾಜ್‌ಗೆ ಮೊದಲು ದುಷ್ಕರ್ಮಿ ಚೂರಿಯಿಂದ ಇರಿದಿದ್ದಾನೆ. ಚೀರಾಟ ಸದ್ದು ಕೇಳಿ ಆಟವಾಡುತ್ತಿದ್ದ ಆಸೀಮ್ ಒಳ ಬರುತ್ತಿದ್ದಂತೆ ಇರಿದು ಕೊಂದಿದ್ದಾನೆ ದುಷ್ಕರ್ಮಿ. 

Mandya: ಜಮೀನು ವಿಚಾರಕ್ಕೆ ಗನ್ ಶೂಟ್‌ ಮಾಡಿದ ದುಷ್ಕರ್ಮಿಗಳು, ತಂದೆ ಮಡಿಲಲ್ಲಿ ಒದ್ದಾಡಿ ಪ್ರಾಣಬಿಟ್ಟ ಪುತ್ರ

ಇವರ ಮನೆಯಿಂದ ಬೊಬ್ಬೆ ಕೇಳಿ ಪಕ್ಕದ ಮನೆ ಯುವತಿ ಹೊರಗಡೆ ಬಂದಿದ್ದಾರೆ. ಆಕೆಯನ್ನೂ ಬೆದರಿಸಿ ಸ್ಥಳದಿಂದ ದುಷ್ಕರ್ಮಿ ಕಾಲ್ಕಿತ್ತಿದ್ದಾನೆ. ಮನೆಯೊಳಗಿದ್ದ ಅತ್ತೆಗೂ ತೀವ್ರ ತರದ ಗಾಯವಾಗಿದೆ.  ಕೊಲೆಯಾದ ಮಹಿಳೆಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಎಸ್‌ಪಿ ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!