ಬಸವನಬಾಗೇವಾಡಿ: ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ, ಕಾರಣ?

Kannadaprabha News   | Asianet News
Published : Feb 04, 2021, 11:48 AM IST
ಬಸವನಬಾಗೇವಾಡಿ: ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ, ಕಾರಣ?

ಸಾರಾಂಶ

ಯುವಕನೊಬ್ಬನನ್ನ ಪ್ರೀತಿಸುತ್ತಿದ್ದ ಬಾಲಕಿ| ತನ್ನ ಮಗಳನ್ನು ಅಪಹರಿಸಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿದ್ದಾನೆ ಎಂದು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಮೃತ ಬಾಲಕಿಯ ತಂದೆ| ಪೋಕ್ಸೋ ಕಾಯ್ದೆ ಹಾಗೂ ಅಪಹರಣ, ಕೊಲೆ ಕಾಯ್ದೆಯಡಿ ಪ್ರಕರಣ ದಾಖಲು| 

ಬಸವನಬಾಗೇವಾಡಿ(ಫೆ.04): ಜ.31ರಂದು ಕಾಣೆಯಾಗಿದ್ದ ಅಪ್ರಾಪ್ತೆಯು ಶವವಾಗಿ ತೋಟದ ಬಾವಿಯಲ್ಲಿ ಮಂಗಳವಾರ ರಾತ್ರಿ ಪತ್ತೆಯಾದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಈ ಘಟನೆ ಕುರಿತಂತೆ ಸಂತೋಷ ತಿಪ್ಪಣ್ಣ ಕಾಡಮಗೇರಿ (22) ಎಂಬ ಯುವಕನು ತನ್ನ ಮಗಳನ್ನು ಪ್ರೀತಿಸುತ್ತಿದ್ದ. ಅವನೇ ನನ್ನ ಮಗಳನ್ನು ಅಪಹರಿಸಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿದ್ದಾನೆ ಎಂದು ಮೃತ ಬಾಲಕಿಯ ತಂದೆ ಬಸವನಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾನೆ. 

ಎಟಿಎಂಗೆ ತುಂಬಬೇಕಿದ್ದ 64 ಲಕ್ಷ ರೂ. ಕದ್ದು ಪರಾರಿ..!

ಈ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಅಪಹರಣ, ಕೊಲೆ ಕಾಯ್ದೆಯಡಿ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಾಗಿದೆ. ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬುಧವಾರ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ, ಡಿವೈಎಸ್ಪಿ ಶಾಂತವೀರ, ಸಿಪಿಐ ಸೋಮಶೇಖರ ಜುಟ್ಟಲ್‌, ಪಿಎಸ್‌ಐ ಚಂದ್ರಶೇಖರ ಹೆರಕಲ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!