
ಬೆಂಗಳೂರು (ಫೆ.17): ಕದ್ದ ದ್ವಿಚಕ್ರ ವಾಹನಗಳಲ್ಲಿ ಸುತ್ತಾಡಿ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ರೌಡಿ ಶೀಟರ್ನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಾಗಡಿ ರಸ್ತೆ ನಿವಾಸಿ ಕುಮಾರೇಶ್(33) ಬಂಧಿತ. ಆರೋಪಿಯಿಂದ ₹3 ಲಕ್ಷ ಮೌಲ್ಯದ ಏಳು ದ್ವಿಚಕ್ರ ವಾಹನಗಳು ಹಾಗೂ ಆರು ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಅಶೋಕನಗರ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋಲಾರದಿಂದ ಬೆಂಗಳೂರಿಗೆ ಬಂದು ಬೈಕ್ ಕದ್ದು ಪರಾರಿಯಾಗುತ್ತಿದ್ದ ಮೂವರು ಕಳ್ಳರು ಬಂಧನ
ಆರೋಪಿ ಕುಮಾರೇಶ್ ಕಾಟನ್ಪೇಟೆ ಠಾಣೆ ರೌಡಿ ಶೀಟರ್ ಆಗಿದ್ದಾನೆ. ಅಪರಾಧ ಹಿನ್ನೆಲೆಯ ಈತ ಈ ಹಿಂದೆ ಹಲವು ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ. ಜಾಮೀನು ಪಡೆದು ಹೊರಬಂದ ಬಳಿಕವೂ ಅಪರಾಧ ಕೃತ್ಯಗಳನ್ನು ಮುಂದುವರೆಸಿದ್ದ. ನಗರದ ವಿವಿಧೆಡೆ ಸುತ್ತಾಡಿ ಮನೆ, ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ. ಬಳಿಕ ಆ ದ್ವಿಚಕ್ರ ವಾಹನ ಬಳಸಿಕೊಂಡು ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ. ಬಳಿಕ ನಿರ್ಜನ ಪ್ರದೇಶಗಳಲ್ಲಿ ಆ ದ್ವಿಚಕ್ರ ವಾಹನ ಬಿಟ್ಟು ಪರಾರಿಯಾಗುವ ಪ್ರವೃತ್ತಿ ಹೊಂದಿದ್ದಾನೆ.
ಬೆಂಗಳೂರು: ಕೇಳಿದ ಬೈಕ್ ಕದ್ದು ಕೊಡ್ತಿದ್ದ ಗ್ಯಾಂಗ್ ಅಂದರ್..!
ಈತನ ಬಂಧನದಿಂದ ಅಶೋಕನಗರ, ಕಲಾಸಿಪಾಳ್ಯ, ಕಾಟನ್ಪೇಟೆ, ರಾಜಗೋಪಾಲನಗರ, ಅತ್ತಿಬೆಲೆ ಠಾಣೆಗಳಲ್ಲಿ ದಾಖಲಾಗಿದ್ದ ಏಳು ದ್ವಿಚಕ್ರ ವಾಹನ ಕಳವು ಹಾಗೂ ಆರು ಮೊಬೈಲ್ ಸುಲಿಗೆ ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ