ನಾನು ಒಳ್ಳೆಯವನಾಗಿದ್ದೇನೆ, ನನ್ನ ನಂಬಿ ಪ್ಲೀಸ್; ಕೈಮುಗಿದು ನಲಪಾಡ್ ಕಣ್ಣೀರು!

Suvarna News   | Asianet News
Published : Feb 12, 2020, 04:08 PM ISTUpdated : Feb 12, 2020, 05:27 PM IST
ನಾನು ಒಳ್ಳೆಯವನಾಗಿದ್ದೇನೆ,  ನನ್ನ ನಂಬಿ ಪ್ಲೀಸ್; ಕೈಮುಗಿದು ನಲಪಾಡ್ ಕಣ್ಣೀರು!

ಸಾರಾಂಶ

ಕಾರು ಅಪಘಾತದ ಮೂಲಕ ನಾಲ್ವರನ್ನು ಗಂಭೀರವಾಗಿ ಗಾಯಗೊಳಿಸಿ ನಾಪತ್ತೆಯಾಗಿದ್ದ ಕಾಂಗ್ರೆಸ್ ನಾಯಕ ಎನ್ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಇದೀಗ  ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಭಾವನಾತ್ಮಕವಾಗಿ ಮಾತನಾಡಿದ ನಲಪಾಡ್ ನನ್ನನ್ನು ಬಿಟ್ಟು ಬಿಡಿ ಎಂದು ಬೇಡಿಕೊಂಡರು.

ಬೆಂಗಳೂರು(ಫೆ.12): ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ನೀಡಲು ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮುಂದಾಗಿದ್ದಾರೆ. ಅಪಘಾತದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನಲಪಾಡ್, ಅಪಪಘಾತವಾಗಿದ್ದು ಬೆಂಟ್ಲಿ ಕಾರು, ನಾನು ಲ್ಯಾಂಬೋರ್ಗಿನಿ ಕಾರಿನಲ್ಲಿದ್ದೆ ಎಂದು ಹೊಸ ಬಾಂಬ್ ಹಾಕಿದ್ದಾರೆ.

ಇದನ್ನೂ ಓದಿ: ಬೆಂಟ್ಲಿ ಕಾರಿಗೆ ಬೆಚ್ಚಿಬಿದ್ದ ಗನ್‌ಮ್ಯಾನ್; ವಿಚಾರಣೆಯಲ್ಲಿ ಹೇಳಿದ ಇದಕ್ಕೆ ಕಾರಣ ನಲಪಾಡ್!

ನನ್ನನ್ನು ಯಾಕೆ ಗುರಿಯಾಗಿಸುತ್ತಿದ್ದೀರಿ ಎಂದು ಮಾಧ್ಯಮಕ್ಕೆ ನಲಪಾಡ್ ಪ್ರಶ್ನಿಸಿದ್ದಾನೆ. ಈ ಹಿಂದಿನ ಹಲ್ಲೆ ಪ್ರಕರಣದ ಬಳಿಕ ನಾನು ಒಳ್ಳೆಯವನಾಗಿದ್ದೇನೆ. ನನ್ನನ್ನು ನಂಬಿ ಪ್ಲೀಸ್ ಎಂದು ಮೊಹಮ್ಮದ್ ಹ್ಯಾರಿಸ್ ನಲಪಾಡ್ ಕೈಮುಗಿದು ಕಣ್ಣೀರು ಹಾಕಿದ್ದಾರೆ. 

ಇದನ್ನೂ ಓದಿ: ನಲಪಾಡ್ ಪುಂಡಾಟಕ್ಕೆ ಮೂರುವರೆ ಕೋಟಿ ಕಾರು, ಬೆಂಟ್ಲಿ ಅಡಿಗೆ ನಾಲ್ವರು!

ಆಕ್ಸಿಡೆಂಟ್ ಅನ್ನೋದು ಆಕಸ್ಮಿಕ, ಯಾರೂ ಅಪಘಾತವನ್ನೇ ಮಾಡಿಲ್ವಾ? ನನ್ನ ಬಗ್ಗೆ ಯಾಕೆ ಈ ರೀತಿ ಸುದ್ದಿ ಬಿತ್ತರ ಮಾಡುತ್ತೀರಿ. ಅಪಘಾತವಾದಾಗ ನಾನು ಕೂಡ ಸ್ಥಳದಲ್ಲಿದ್ದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದೇನೆ. ಅವರ ಚಿಕಿತ್ಸೆ ವೆಚ್ಚ ಕೂಡ ಭರಿಸಿದ್ದೇನೆ, ಪರಿಹಾರ ಕೂಡ ನೀಡಿದ್ದೇನೆ ಎಂದು ನಲಪಾಡ್ ಹೇಳಿದ್ದಾರೆ. 

ನಲಪಾಡ್ ಕಾರು ಅಪಘಾತ ಪ್ರಕರಣ

ನಗರದ ಮೇಕ್ರಿ ಸರ್ಕಲ್ ಬಳಿ ಮೊಹಮ್ಮದ್ ನಲಪಾಡ್‌ಗೆ ಸೇರಿದ ಬೆಂಟ್ಲಿ ಕಾರು ಅಪಘಾತವಾಗಿತ್ತು. ಕಾರು ಗುದ್ದಿದ ಪರಿಣಾಮ ಬೈಕ್ ಸವಾರ ಹಾಗೂ ಆಟೋ ರಿಕ್ಷಾದಲ್ಲಿ ಮೂವರು ಗಾಯಗೊಂಡಿದ್ದರು. ಈ ಪ್ರಕರಣದ ಬಳಿಕ ನಲಪಾಡ್ ನಾಪತ್ತೆಯಾಗಿದ್ದರು. ನಲಪಾಡ್ ಗನ್‌ಮ್ಯಾನ್ ಬಾಲು ಸದಾಶಿವನಗರ ಪೊಲೀಸ್ ಠಾಣೆಗೆ ಆಗಮಿಸಿ ನಾನೇ ಅಪಘಾತ ಮಾಡಿದ್ದು ಎಂದು ಹೇಳಿಕೆ ಕೊಟ್ಟಿದ್ದ. ಆದರೆ ಪೊಲೀಸರು ಸಾಕ್ಷ್ಯ ಆಧಾರದ ಮೇಲೆ ನಲಪಾಡ್ ಕಾರು ಡ್ರೈವ್ ಮಾಡಿರುವುದು ಖಚಿತವಾಗಿದೆ. ಪ್ರಕರಣ ದಿಕ್ಕು ತಪ್ಪಿಸಿದ ಹಾಗೂ ಸಾಕ್ಷ್ಯ ನಾಶ ಆರೋಪದಡಿ ನಲಪಾಡ್ ಗನ್‌ಮ್ಯಾನ್ ಬಂಧಿಸಲಾಗಿತ್ತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?