ಕೋರ್ಟ್‌ನಲ್ಲಿ ಸರ್ಕಾರಿ ನೌಕರಿ ಕೊಡಿಸೋದಾಗಿ ರೈತನ ಮಗನಿಗೆ ₹1.80 ಲಕ್ಷ ವಂಚನೆ; ಹಣ ಕೇಳಿದ್ರೆ ಗತಿ ಕಾಣಿಸುವೆ ಎಂದ ದುರುಳ!

Published : Feb 09, 2024, 12:13 PM IST
ಕೋರ್ಟ್‌ನಲ್ಲಿ ಸರ್ಕಾರಿ ನೌಕರಿ ಕೊಡಿಸೋದಾಗಿ ರೈತನ ಮಗನಿಗೆ ₹1.80 ಲಕ್ಷ ವಂಚನೆ; ಹಣ ಕೇಳಿದ್ರೆ ಗತಿ ಕಾಣಿಸುವೆ ಎಂದ ದುರುಳ!

ಸಾರಾಂಶ

ರೈತರೊಬ್ಬರ ಮಗನಿಗೆ ನ್ಯಾಯಾಲಯದಲ್ಲಿ ಸರ್ಕಾರಿ ನೌಕರಿ ಕೊಡಿಸುವುದಾಗಿ ₹1.80 ಲಕ್ಷ ಪಡೆದು ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು (ಫೆ.9) : ರೈತರೊಬ್ಬರ ಮಗನಿಗೆ ನ್ಯಾಯಾಲಯದಲ್ಲಿ ಸರ್ಕಾರಿ ನೌಕರಿ ಕೊಡಿಸುವುದಾಗಿ ₹1.80 ಲಕ್ಷ ಪಡೆದು ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಉಯ್ಯಂಬಳ್ಳಿ ಗ್ರಾಮದ ದುಂಡಯ್ಯ(63) ವಂಚನೆಗೆ ಒಳಗಾದವರು. ಇವರು ನೀಡಿದ ದೂರಿನ ಮೇರೆಗೆ ಗೌರಿಬಿದನೂರಿನ ಪದ್ಮರಾಜ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪ್ರಾಪ್ತ ವಯಸ್ಸಿನಲ್ಲೇ ಕಾರ್ ಡ್ರೈವರ್ ಜೊತೆ ಲವ್; ಮನೆಯವ್ರು ವಿರೋಧಿಸಿದ್ದಕ್ಕೆ ಬಾಲಕಿ ಆತ್ಮಹತ್ಯೆ!

ಏನಿದು ಪ್ರಕರಣ?:

ದೂರುದಾರ ದುಂಡಯ್ಯ 2021ನೇ ಸಾಲಿನಲ್ಲಿ ವಿಧಾನಸೌಧದ ಬಳಿ ಇರುವ ಮಾಹಿತಿ ಆಯೋಗದ ಬಳಿಗೆ ಬಂದಿದ್ದರು. ಈ ವೇಳೆ ಪದ್ಮರಾಜ್‌ ಎಂಬಾತ ಸಿಕ್ಕಿ ಪರಿಚಯ ಮಾಡಿಕೊಂಡಿದ್ದಾನೆ. ‘ನಾನು ಮಾಹಿತಿ ಆಯೋಗದಲ್ಲಿ ಕೆಲಸ ಮಾಡುತ್ತಿದ್ದೇನೆ. ನ್ಯಾಯಾಲಯಗಳಲ್ಲಿ ಕೆಲಸಗಳು ಖಾಲಿಯಿವೆ. 10ನೇ ತರಗತಿ ಪಾಸ್‌ ಆದವರಿಗೆ ಕೆಲಸ ಕೊಡಿಸುತ್ತೇನೆ. ಮೂರು ಲಕ್ಷ ರುಪಾಯಿ ಕೊಟ್ಟರೆ ಕೆಲಸ ಕೊಡಿಸುತ್ತೇನೆ. ಯಾರಾದರೂ ಇದ್ದರೆ ತಿಳಿಸಿ’ ಎಂದು ಹೇಳಿದ್ದಾನೆ.

₹1.80 ಲಕ್ಷ ಪಡೆದ:

ಆಗ ದುಂಡಯ್ಯ ತನ್ನ ಮಗನಿಗೆ ಆ ಕೆಲಸ ಕೊಡಿಸುವಂತೆ ಕೇಳಿಕೊಂಡಿದ್ದಾರೆ. ನಾನು ಬಡವನಾಗಿದ್ದು, ₹3 ಲಕ್ಷ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಆಗ ಪದ್ಮರಾಜ್‌, ‘ನೀವು ₹2 ಲಕ್ಷ ಕೊಡಿ ಸಾಕು. ನಿಮ್ಮ ಮಗನಿಗೆ ಕೆಲಸ ಕೊಡಿಸುತ್ತೇನೆ’ ಎಂದಿದ್ದಾನೆ. ಇದೇ ವೇಳೆ ಯಾವುದೋ ಅಧಿಕಾರಿಗೆ ಫೋನ್‌ ಮಾಡುವ ಹಾಗೆ ಅಪರಿಚಿತನಿಗೆ ಕರೆ ಮಾಡಿ, ‘ನಮ್ಮ ದುಂಡಯ್ಯನ ಮಗನಿಗೆ ನ್ಯಾಯಾಲಯದಲ್ಲಿ ಒಂದು ಕೆಲಸ ಕೊಡಬೇಕು’ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ. ಬಳಿಕ ದುಂಡಯ್ಯ ಅವರು ಸಂಬಂಧಿಕರು ಹಾಗೂ ಸ್ನೇಹಿತರ ಬಳಿ ₹1.80 ಲಕ್ಷ ಸಾಲ ಪಡೆದು ಪದ್ಮರಾಜ್‌ಗೆ ಆ ಹಣವನ್ನು ನೀಡಿದ್ದಾರೆ.

2 ವರ್ಷ ಅಲೆದಾಡಿಸಿದ:

ಕೆಲ ದಿನಗಳ ಬಳಿಕ ಕೆಲಸದ ಬಗ್ಗೆ ಪದ್ಮರಾಜ್‌ನನ್ನು ಪ್ರಶ್ನಿಸಿದಾಗ ಇಂದು-ನಾಳೆ ಎಂದು ಸುಮಾರು ಎರಡು ವರ್ಷಗಳ ಕಾಲ ಸಬೂಬು ಹೇಳಿ ದುಂಡಯ್ಯನನ್ನು ಅಲೆದಾಡಿಸಿದ್ದಾನೆ. ಬಳಿಕ ಕೆಲಸ ಕೊಡಿಸಿ, ಇಲ್ಲವೇ ನನ್ನ ಹಣ ವಾಪಾಸ್‌ ಕೊಡಿ ಎಂದು ದುಂಡಯ್ಯ ಕೇಳಿದ್ದಾರೆ. ಈ ವೇಳೆ ಪದ್ಮರಾಜ್‌ ಒಂದು ಲಕ್ಷ ರು. ಮೊತ್ತದ ಚೆಕ್‌ ಬರೆದುಕೊಟ್ಟಿದ್ದಾನೆ. ಆ ಚೆಕ್‌ ಅನ್ನು ದುಂಡಯ್ಯ ಬ್ಯಾಂಕ್‌ಗೆ ಹಾಕಿದ್ದಾಗ ಚೆಕ್‌ ಬೌನ್ಸ್‌ ಆಗಿದೆ.

ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ!

‘ಹಣ ಕೇಳಿದರೆ ಗತಿ ಕಾಣಿಸುವೆ’

ಬಳಿಕ ದುಂಡಯ್ಯ ಕರೆ ಮಾಡಿದಾಗ ಪದ್ಮರಾಜ್‌ ಕರೆ ಸ್ವೀಕರಿಸಿಲ್ಲ. ಬಳಿಕ ಆತನನ್ನು ಭೇಟಿ ಮಾಡಿ ಹಣದ ಬಗ್ಗೆ ಪ್ರಶ್ನಿಸಿದಾಗ, ‘ಯಾರು ನೀನು? ನಾನು ನಿನಗೆ ಯಾವುದೇ ಹಣ ಕೊಡಬೇಕಿಲ್ಲ. ಮತ್ತೊಮ್ಮೆ ನೀನು ನನಗೆ ಹಣ ಕೇಳಿದರೆ ಒಂದು ಗತಿ ಕಾಣಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದಾನೆ.

ಹೀಗಾಗಿ ದುಂಡಯ್ಯ ಅವರು ವಂಚಕ ಪದ್ಮರಾಜ್‌ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ