ಅಕ್ರಮ ಹಣ ವರ್ಗಾವಣೆ: ರಾಗಿಣಿ, ಸಂಜನಾಗೆ ಇ.ಡಿ. ಗ್ರಿಲ್..!

Kannadaprabha News   | Asianet News
Published : Sep 25, 2020, 08:35 AM ISTUpdated : Sep 25, 2020, 09:22 AM IST
ಅಕ್ರಮ ಹಣ ವರ್ಗಾವಣೆ: ರಾಗಿಣಿ, ಸಂಜನಾಗೆ ಇ.ಡಿ. ಗ್ರಿಲ್..!

ಸಾರಾಂಶ

ರಾಗಿಣಿ ಹಾಗೂ ಸಂಜನಾ ಪ್ರಕರಣದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಅವಕಾಶ ನೀಡಬೇಕು ಎಂದು ಇ.ಡಿ. ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಇದೀಗ ಕೋರ್ಟ್ ಅಸ್ತು ಎಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಸೆ.25): ಡ್ರಗ್ಸ್‌ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಇದೀಗ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.)ದ ವಿಚಾರಣೆಯ ಬಿಸಿ ತಾಗಲಿದೆ. ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ.

"

ಪ್ರಕರಣದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಅವಕಾಶ ನೀಡಬೇಕು ಎಂದು ಇ.ಡಿ. ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಮತ್ತು ಅವರ ಸ್ನೇಹಿತರಾದ ವಿರೇಂದ್ರ ಖನ್ನಾ, ರವಿಶಂಕರ್‌ ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡಿದೆ. ನ್ಯಾಯಾಲಯವು ಅನುಮತಿ ನೀಡಿರುವುದರಿಂದ ಐದು ದಿನಗಳ ಕಾಲ ಇ.ಡಿ. ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ವಿಚಾರಣೆ ನಡೆಸಲಿದ್ದಾರೆ.

ಓಪನ್‌ ಕೋರ್ಟ್‌ನಲ್ಲಿ ನೋಡಲಾಗದ ಸಿಡಿಗಳು, ರಾಗಿಣಿ, ಸಂಜನಾ ರಹಸ್ಯ ಬಟಾಬಯಲು!

ಸಿಸಿಬಿ ಅಧಿಕಾರಿಗಳು ಆರೋಪಿಗಳ ನಿವಾಸದಲ್ಲಿ ಪರಿಶೀಲನೆ ನಡೆಸಿದಾಗ ಡ್ರಗ್ಸ್‌ ಜಾಲದಲ್ಲಿ ಅಪಾರ ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಕ್ರಮವಾಗಿ ಹಣ ವರ್ಗಾವಣೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಬೇಕಾಗಿದೆ. ವಿಚಾರಣೆ ವೇಳೆ ಹಣ ವರ್ಗಾವಣೆ ಕುರಿತು ಮಾಹಿತಿ ಕಲೆ ಹಾಕಬೇಕು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಅನುಮತಿ ನೀಡುವಂತೆ ಇ.ಡಿ. ಅಧಿಕಾರಿಗಳು ಕೋರಿದ್ದರು.

ಐದು ದಿನಗಳ ಕಾಲ ಇ.ಡಿ. ಅಧಿಕಾರಿಗಳು ಆರೋಪಿಗಳನ್ನು ವಿಚಾರಣೆ ನಡೆಸಿ ಹಣ ವರ್ಗಾವಣೆ ಕುರಿತು ಹೆಚ್ಚಿನ ಮಾಹಿತಿ ಕ್ರೋಢೀಕರಿಸಲಿದ್ದಾರೆ. ಒಂದು ವೇಳೆ ಅಕ್ರಮ ಹಣ ವರ್ಗಾವಣೆಯಾಗಿರುವುದು ಕಂಡು ಬಂದರೆ ಆರೋಪಿಗಳಿಗೆ ಮತ್ತೊಂದು ಸಂಕಷ್ಟಎದುರಾಗಲಿದೆ ಎಂದು ಮೂಲಗಳು ಹೇಳಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!
ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ , ಯುವಕನ ಮೇಲೆ ಹಲ್ಲೆ, ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!