Mangaluru; ಮತ್ತೆ ನೈತಿಕ ಪೊಲೀಸ್ ಗಿರಿ, ಮರಕ್ಕೆ ಕಟ್ಟಿ ಕಾರ್ಮಿಕನಿಗೆ ಥಳಿತ

Published : Dec 15, 2022, 05:04 PM IST
Mangaluru; ಮತ್ತೆ ನೈತಿಕ ಪೊಲೀಸ್ ಗಿರಿ, ಮರಕ್ಕೆ ಕಟ್ಟಿ ಕಾರ್ಮಿಕನಿಗೆ ಥಳಿತ

ಸಾರಾಂಶ

ಮಹಿಳೆಯರ ಮೈ ಕೈ ಮುಟ್ಡಿದ್ದಾನೆ ಅಂತ ಆರೋಪಿಸಿ ‌ಕೂಲಿ ಕಾರ್ಮಿಕನೊಬ್ಬನಿಗೆ ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ‌ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಯಿಯ ಕುದ್ಕೋಳಿ ಎಂಬಲ್ಲಿ ನಡೆದಿದೆ.

ವರದಿ: ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ 

ಮಂಗಳೂರು (ಡಿ.15): ಮಹಿಳೆಯರ ಮೈ ಕೈ ಮುಟ್ಡಿದ್ದಾನೆ ಅಂತ ಆರೋಪಿಸಿ ‌ಕೂಲಿ ಕಾರ್ಮಿಕನೊಬ್ಬನಿಗೆ ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ‌ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಯಿಯ ಕುದ್ಕೋಳಿ ಎಂಬಲ್ಲಿ ನಡೆದಿದೆ. ನೈತಿಕ ಪೊಲೀಸ್ ಗಿರಿ ಸಂಬಂಧಿಸಿ ಹಲವು ಗಂಟೆಗಳ ಬಳಿಕ ಕೊನೆಗೂ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯ ವಿಡಿಯೋ ವೈರಲ್ ಬೆನ್ನಲ್ಲೇ ಅಲರ್ಟ್ ಆದ ಬಂಟ್ವಾಳ ಗ್ರಾಮಾಂತರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸದ್ಯ ಮಂಗಳೂರಿನ ‌ಖಾಸಗಿ ಆಸ್ಪತ್ರೆಗೆ ದಾಖಲಾದ ಇಸಾಕ್ (45) ಚಿಕಿತ್ಸೆ ಪಡೆಯುತ್ತಿದ್ದಾರೆ.

ದ‌.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ವಿಡಿಯೋ ವೈರಲ್ ಆಗಿತ್ತು. ಬಿ.ಸಿ‌.ರೋಡ್ ಮಾರ್ಗವಾಗಿ ಮೂಡಬಿದ್ರೆಗೆ ಬಸ್ ನಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಇಸಾಕ್ ಗೆ ಮಹಿಳೆಯರಿಗೆ ಮೈ ಕೈ ತಾಗಿದ ವಿಚಾರದಲ್ಲಿ ತಗಾದೆ ತೆಗೆದು ಹಲ್ಲೆ ನಡೆಸಲಾಗಿದೆ‌. ರಾಯಿ ಬಳಿ ಬಸ್ಸಿನಿಂದ ಇಳಿಸಿ ಕಂಡಕ್ಟರ್ ಮಾತಿನ ಚಕಮಕಿ ನಡೆಸಿದ್ದು, ಬಳಿಕ ಸ್ಥಳಕ್ಕೆ ಬಂದ ಯುವಕರ ತಂಡದಿಂದ ಗಂಭೀರ ಹಲ್ಲೆ ನಡೆದಿದೆ ಅಂತ ದೂರಲಾಗಿದೆ. ನಿರ್ಜನ ಪ್ರದೇಶದಲ್ಲಿ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರೋ ಆರೋಪ ವ್ಯಕ್ತವಾಗಿದ್ದು, ಬೆನ್ನು ಮತ್ತು ಇಡೀ ಮೈಗೆ ಬಾಸುಂಡೆ ಬರುವಂತೆ ಹಲ್ಲೆ ಮಾಡಲಾಗಿದೆ. ಬಂಟ್ವಾಳದ ಮೂಲರಪಟ್ನ ನಿವಾಸಿ ಇಸಾಕ್ ಸದ್ಯ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಾ ಇದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಒಂಟಿ ಬಾಡಿಗೆದಾರರೇ ಎಚ್ಚರ: ವಿದ್ಯಾರ್ಥಿಯನ್ನು ಕೊಂದು ದೇಹ 3 ತುಂಡಾಗಿ ಕತ್ತರಿಸಿ ಎಸೆದ ಮನೆ

ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿತ: ಇಸಾಕ್
ಗಂಭೀರ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಇಸಾಕ್ ಹೇಳಿಕೆ ನೀಡಿದ್ದು, ಬೆಳಿಗ್ಗೆ ಬಿ.ಸಿ‌.ರೋಡ್ ನಿಂದ ಮೂಡಬಿದ್ರೆಗೆ ಬಸ್ಸಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದೆ. ಈ ವೇಳೆ ಕುಳಿತಿದ್ದ ನನ್ನ ಕೈಗೆ ಒಬ್ಬಳು ವಿದ್ಯಾರ್ಥಿನಿ ತನ್ನ ಬ್ಯಾಗ್ ಕೊಟ್ಟಿದ್ದಳು. ರಾಯಿ ಬಳಿ ಇಳಿಯುವಾಗ ಬ್ಯಾಗ್ ತೆಗೆದುಕೊಂಡು ಹೋದಳು. ಆದರೆ ಈ ವೇಳೆ ಕಂಡೆಕ್ಟರ್ ಮಹಿಳೆಯರ ಮೈಕೈ ಮುಟ್ಟುತ್ತೀಯಾ ಅಂತ ಗಲಾಟೆ ಮಾಡಿದ.‌ ರಾಯಿಯಿಂದ ಸ್ವಲ್ಪ ಎದುರು ಕುದ್ಕೋಳಿಯಲ್ಲಿ ಇಳಿಸಿ ಗಲಾಟೆ ಮಾಡಿದ. ಆಗ ಅಲ್ಲಿ ಮೊದಲೇ ‌ಕೆಲ ಯುವಕರು ಬಂದು ನಿಂತಿದ್ದರು‌. ಅವರು ಆಟೋ ರಿಕ್ಷಾದಲ್ಲಿ ಹಾಕಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದರು.‌ ಅಲ್ಲಿ ಗೋಲಿ ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ‌ಹಲ್ಲೆ ಮಾಡಿದ್ರು. ಕಣ್ಣು, ಬೆನ್ನು, ಕೈ ಕಾಲಿಗೆ ಮನಸೋ ಇಚ್ಚೆ ಥಳಿಸಿದ್ರು. ಆ ಬಳಿಕ ಪೊಲೀಸರು ಬಂದು ಜೀಪಿನಲ್ಲಿ ಹಾಕಿ ನನ್ನನ್ನ ಕರೆದುಕೊಂಡು ಹೋದ್ರು.

MANDYA: ಶಿಕ್ಷಕನಿಂದ ಲೈಂಗಿಕ ಕಿರುಕುಳ, ಬೇಸತ್ತ ವಿದ್ಯಾರ್ಥಿನಿಯರಿಂದ ಧರ್ಮದೇಟು

ಬಳಿಕ ಆಸ್ಪತ್ರೆಗೆ ‌ಕರೆದುಕೊಂಡು ಹೋಗಿ ಬಿಪಿ ಚೆಕ್ ಮಾಡಿ ಬಿಟ್ಟರು. ಯಾವುದೇ ದೂರು ಅಥವಾ ಪ್ರಕರಣ ದಾಖಲಿಸದೇ ಮನೆಗೆ ಕಳಿಸಿದ್ರು. ಇಂದು ಮತ್ತೆ ಫೋನ್ ಮಾಡಿ ದೂರು ಪಡೆದಿದ್ದಾರೆ.‌ ನಾನು ನಿತ್ಯ ಅದೇ ಬಸ್ಸಿನಲ್ಲಿ ಹೋಗ್ತಾ ಇದ್ದೆ, ಕಂಡೆಕ್ಟರ್ ಪರಿಚಯವಿದೆ. ಆದರೆ ಹಲ್ಲೆ ಮಾಡಿದ ಯುವಕರ ಬಗ್ಗೆ ಗೊತ್ತಿಲ್ಲ, ನೋಡಿದರೆ ಗುರುತು ಸಿಗುತ್ತೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?