ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ!

Published : Feb 08, 2024, 06:10 PM IST
ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ!

ಸಾರಾಂಶ

ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ.

ತುಮಕೂರು (ಫೆ.8): ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ.

ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದ ಮೊಸರನ್ನವನ್ನು ಮಕ್ಕಳು ಸೇವನೆ ಮಾಡಿದ್ದಾರೆ. ರಾತ್ರಿ ವೇಳೆಗೆ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಕೂಡಲೇ ಪೋಷಕರು ಕುಣಿಗಲ್ ತಾಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಕಲಬುರಗಿ: ಸರ್ಕಾರಿ ಶಾಲೆಯಲ್ಲಿ ಮಕ್ಕಳ ಬಿಸಿಯೂಟಕ್ಕೆ ಕಂಟಕ..!

10 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಸ್ಥಳಕ್ಕೆ ಇದೀಗ ಕುಣಿಗಲ್ ಟಿಹೆಚ್​ಒ ಡಾ. ಮರಿಯಪ್ಪ, ಹಾಗೂ ಆರೋಗ್ಯಾಧಿಕಾರಿ ಬೋರೆಗೌಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ತುಮಕೂರು : ಬಿಸಿಯೂಟದಲ್ಲಿ ಹುಳು ಪತ್ತೆ: ಆತಂಕದಲ್ಲಿ ವಿದ್ಯಾರ್ಥಿಗಳು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ