ಮಲೆನಾಡಲ್ಲಿ 30 ಮಂಗಗಳ ಮಾರಣ ಹೋಮ; ತಲೆಗೆ ಹೊಡೆದು ಕೊಂದಿರುವ ನರರಾಕ್ಷಸರು!

Published : Jun 07, 2024, 04:52 PM IST
ಮಲೆನಾಡಲ್ಲಿ 30 ಮಂಗಗಳ ಮಾರಣ ಹೋಮ; ತಲೆಗೆ ಹೊಡೆದು ಕೊಂದಿರುವ ನರರಾಕ್ಷಸರು!

ಸಾರಾಂಶ

ಜ್ಞೆ ತಪ್ಪುವ ಔಷಧವಿಟ್ಟು 30 ಮಂಗಗಳ ಮಾರಣಹೋಮ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರ ತಾಲೂಕಿನ ದ್ಯಾವಣ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಂಗಗಳ ಪೈಕಿ 16 ಗಂಡು, 14 ಹೆಣ್ಣು, 4 ಮರಿ ಮಂಗಗಳು ಸೇರಿವೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.

ಚಿಕ್ಕಮಗಳೂರು (ಜೂ.7): ಪ್ರಜ್ಞೆ ತಪ್ಪುವ ಔಷಧವಿಟ್ಟು 30 ಮಂಗಗಳ ಮಾರಣಹೋಮ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರ ತಾಲೂಕಿನ ದ್ಯಾವಣ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದ ಮಂಗಗಳ ಪೈಕಿ 16 ಗಂಡು, 14 ಹೆಣ್ಣು, 4 ಮರಿ ಮಂಗಗಳು ಸೇರಿವೆ. ಮೊದಲಿಗೆ ತೋಟದ ಬಾಳೆಹಣ್ಣಿಗೆ ಪ್ರಜ್ಞೆ ತಪ್ಪುವ ಔಷಧ ಬೆರೆಸಿರುವ ಪಾಪಿಗಳು. ಬಾಳೆಹಣ್ಣು ತಿಂದ ಬಳಿಕ ಪ್ರಜ್ಞೆ ತಪ್ಪಿ ಬಿದ್ದ ಮಂಗಗಳ ತಲೆಗೆ ಬಲವಾಗಿ ಹೊಡೆದು ಕೊಂದಿರುವ ನರರಾಕ್ಷಸರು ನಂತರ ರಸ್ತೆಗೆ ಎಸೆದು ಹೋಗಿದ್ದಾರೆ.

ಚಿಕ್ಕಮಗಳೂರು: ಸಂಪೂರ್ಣ ಗುಂಡಿಮಯವಾದ ರಾಜ್ಯ ಹೆದ್ದಾರಿ, ಸರ್ಕಾರಕ್ಕೆ ವಾಹನ ಸವಾರರ ಹಿಡಿಶಾಪ..!

30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯ, ರಕ್ತ ಸುರಿದು ಮೃತಪಟ್ಟಿವೆ. ಮೂವತ್ತು ಮಂಗಗಳಿಗೆ ತಲೆಗೆ ಒಡೆದೆ ಕೊಂದಿರುವ ರಾಕ್ಷಸರು. ಮಂಗಗಳ ಕೊಲೆ ಕಾರಣ ತಿಳಿದುಬಂದಿಲ್ಲ. ತೋಟದ ಬೆಳೆ ನಾಶ ಮಾಡುತ್ತವೆಂದು ಕೊಂದಿರಬಹುದಾ? ಅಥವಾ ಬೇರೆ ಏನಾದರೂ ಕಾರಣ ಇದ್ದಿರಬಹುದಾ? ಒಟ್ಟಿನಲ್ಲಿ ಮೂಕ ಪ್ರಾಣಿಗಳನ್ನ ರೀತಿ ಮನುಷ್ಯತ್ವಹೀನರಂತೆ ಹೊಡೆದುಕೊಂದಿರುವುದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲೆನಾಡಿಗೆ ಮಳೆ ಬಂದ್ರೆ ಕರೆಂಟೂ ಇರಲ್ಲ, ಮೊಬೈಲ್ ನೆಟ್‌ವರ್ಕೂ ಸಿಗಲ್ಲ

ಘಟನೆ ಬಳಿಕ ಸ್ಥಳಕ್ಕೆ ಡಿಎಫ್‌ಓ, ಆರ್‌ಎಫ್‌ಓ, ಪಿಎಸ್‌ಐ, ಪಶುಸಂಗೋಪನೆ, ಪಶುವೈದ್ಯರು, ಪಂಚಾಯ್ತಿ, ಆಶಾ ಕಾರ್ಯಕರ್ತೆಯರು ಸೇರಿ ವಿವಿಧ ಇಲಾಖೆಯ ಎಲ್ಲ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎನ್‌ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ