ಗೃಹಪ್ರವೇಶ ಊಟ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Published : Jun 04, 2024, 10:07 AM IST
ಗೃಹಪ್ರವೇಶ ಊಟ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಸಾರಾಂಶ

ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 40ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡ ಘಟನೆ ಮೈಸೂರು ತಾಲೂಕಿನ ಬಾರ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಸೂರು (ಜೂ.4): ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 40ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡ ಘಟನೆ ಮೈಸೂರು ತಾಲೂಕಿನ ಬಾರ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಮೇ.31ರಂದು ನಡೆದಿದ್ದ ಗೃಹಪ್ರವೇಶ, ನೂರಾರು ಜನರು ಗೃಹಪ್ರವೇಶಕ್ಕೆ ಆಗಮಿಸಿದ್ದರು. ಗೃಹಪ್ರವೇಶಕ್ಕೆ ಬಂದವರು ಎಲ್ಲರೂ ಊಟ ಸೇವಿಸಿದ್ದರು. ಊಟ ಸೇವಿಸಿದ ಬಳಿಕ ಭಾನುವಾರ 26 ಜನರಿಗೆ ಹಾಗೂ ಸೋಮವಾರ 13 ಜನರಿಗೆ ವಾಂತಿ ಭೇದಿ ಹೊಟ್ಟೆ ನೋವು  ಕಾಣಿಸಿಕೊಂಡಿದೆ. ಅವರ ಪೈಕಿ 17ಕ್ಕೂ ಹೆಚ್ಚು ಮಂದಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಉಳಿದವರು ಚೇತರಿಸಿಕೊಂಡಿದ್ದಾರೆ. 

ಫುಡ್ ಪಾಯ್ಸನ್‌ನಿಂದ ಜನರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಎಲ್ಲರೂ ಚೇತರಿಸಿಕೊಂಡಿದ್ದಾರೆ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ದೇವರ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

350ಕ್ಕೂ ಹೆಚ್ಚು ಮಂದಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಊಟ ಮಾಡಿದ್ದಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಗ್ರಾಮಸ್ಥರು ತಿಳಿಸಿದ್ದಾರೆ. ಸಮಾರಂಭದಲ್ಲಿ ಆಹಾರ ಸೇವಿಸಿದ ಕಾರಣದಿಂದ ಅಥವಾ ಗ್ರಾಮದಲ್ಲಿ ಸರಬರಾಜು ಮಾಡಿದ ಕಲುಷಿತ ನೀರು ಕುಡಿದ ಕಾರಣದಿಂದ ಈ ಘಟನೆ ಸಂಭವಿಸಿದೆಯೇ ಎಂಬುದು ನಮಗೆ ತಿಳಿದಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಇದೇ ವೇಳೆ ಗ್ರಾಮಕ್ಕೆ ಭೇಟಿ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿಗಳು, ಆಹಾರ ಮತ್ತು ಟ್ಯಾಂಕ್‌ಗಳಲ್ಲಿನ ನೀರಿನ ಮಾದರಿಗಳನ್ನು ಪರಿಶೀಲನೆಗಾಗಿ ಸಂಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?